ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ದಾಳಿ: ಮೂವರ ಬಂಧನ
Egg attack on BJP MLA Munirathna: Three arrested
ಬೆಂಗಳೂರು 25: ಬಿಜೆಪಿ ಶಾಸಕ ಮುನಿರತ್ನ ಅವರು ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ವೇಳೆ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ.
ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ. ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ ನನ್ನನ್ನು ಹತ್ಯೆ ಮಾಡುತ್ತಿದ್ದರು. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಹನುಮಂತರಾಯಪ್ಪ ಸೇರಿದಂತೆ ಕೆಲವರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 