ವಿದ್ಯುತ್ ತಂತಿಬೇಲಿ ಸ್ಪರ್ಶ : ಎರಡು ಕಾಡನೆಗಳ ದುರ್ಮರಣ
ಚಾಮರಾಜನಗರ, ಫೆ 29 : ವಿದ್ಯುತ್ ಬೇಲಿ ತುಳಿದು ಕಾಡಾನೆಗಳೆರಡು ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಕರುಳವಾಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಆಹಾರ ಅರಸಿ ಬಂದ ಆನೆಗಳು ಜಮೀನಿಗ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಷಿಸುತ್ತಿದ್ದಂತೆಯೇ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎರಡೂ ಗಂಡಾನೆಗಳು 30 ರಿಂದ 40ರ ವಯೋಮಾನದವು ಎಂದು ಅಂದಾಜಿಸಲಾಗಿದೆ. ಶನಿವಾರ ಬೆಳಿಗ್ಗೆ ಗ್ರಾಮಸ್ಥರಿಗೆ ಎರಡೂ ಆನೆಗಳ ಮೃತ ದೇಹಗಳು ಕಂಡುಬಂದಿವೆ.
ಘಟನಾ ಸ್ಥಳಕ್ಕೆ ತಮಿಳುನಾಡಿನ ಸತ್ಯಮಂಗಲಂ ಜಿಲ್ಲೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 