ವಿದ್ಯುತ್ ತಂತಿಬೇಲಿ ಸ್ಪರ್ಶ : ಎರಡು ಕಾಡನೆಗಳ ದುರ್ಮರಣ
ಚಾಮರಾಜನಗರ, ಫೆ 29 : ವಿದ್ಯುತ್ ಬೇಲಿ ತುಳಿದು ಕಾಡಾನೆಗಳೆರಡು ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಕರುಳವಾಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಆಹಾರ ಅರಸಿ ಬಂದ ಆನೆಗಳು ಜಮೀನಿಗ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಷಿಸುತ್ತಿದ್ದಂತೆಯೇ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎರಡೂ ಗಂಡಾನೆಗಳು 30 ರಿಂದ 40ರ ವಯೋಮಾನದವು ಎಂದು ಅಂದಾಜಿಸಲಾಗಿದೆ. ಶನಿವಾರ ಬೆಳಿಗ್ಗೆ ಗ್ರಾಮಸ್ಥರಿಗೆ ಎರಡೂ ಆನೆಗಳ ಮೃತ ದೇಹಗಳು ಕಂಡುಬಂದಿವೆ.
ಘಟನಾ ಸ್ಥಳಕ್ಕೆ ತಮಿಳುನಾಡಿನ ಸತ್ಯಮಂಗಲಂ ಜಿಲ್ಲೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 