ಬಿರುಗಾಳಿ ಮಳೆಗೆ ಶಾಲೆಯ ಮೇಲಚ್ವಾವಣಿ ವಿದ್ಯುತ್ ಕಂಬ ಧರಾಶಾಹಿ..!
Electricity pole collapses due to heavy rain..!
ಕಾಗವಾಡ 24: ತಾಲೂಕಿನಲ್ಲಿ ಮಂಗಳವಾರ ಹಾಗೂ ಬುಧವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಪಟ್ಟಣದ ಅಥಣಿ ರಸ್ತೆಗೆ ಹಾಗೂ ಸುತ್ತಮುತ್ತಲಿನ ಸುಮಾರು 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿ, ತಂತಿಗಳು ತುಂಡಾಗಿವೆ. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅಪಾರ ಹಾನಿ ಸಂಭವಿದೆ.
ಮಂಗಳವಾರ ರಾತ್ರಿ ಸುರಿದ ಮಳೆ ಬಿರುಗಾಳಿಗೆ ಪಟ್ಟಣದ ಬೆಳಗಾವಿ ರಸ್ತೆಗೆ ಹೊಂದಿಕೊಂಡಿರು ಬಾಬನಗೌಡ ಪಾಟೀಲ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ಕೊಣೆಗಳ ಹಾಗೂ ಸಭಾಂಗಣದ ಮೇಲ್ಚಾವಣಿ ಹಾರಿ ಹೋಗಿದ್ದು, ಶಾಲೆಗಳು ರಜೆ ಇರುವು ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲಾ.
ಬುಧವಾರವು ಕೂಡ ರಭಸವಾದ ಗಾಳಿ ಮಳೆ ಬಿದ್ದಿರುವ ಪರಿಣಾಮ ಗಿಡಗಳು ರಸ್ತೆಯ ಮೇಲೆ ಹೊರಳಿದ್ದು, ಅಧಿಕಾರಿಗಳು ಕೂಡಲೇ ಮರಗಳನ್ನು ತೆರವು ಗೋಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಒಂದು ಕಡೆ ಬಿಸಿಲಿನ ಜಳಕ್ಕೆ ಬೇಸತ್ತಿದ್ದ ಜನಕ್ಕೆ ಮಳೆರಾಯ ತಂಪೆಯೆರೆದರೇ ಇನ್ನೊಂದು ಕಡೆ ಬಿರುಗಾಳಿಗೆ ವಿದ್ಯುತ್ ಕಂಬಗಳು ಹಾಗೂ ಮೇಲ್ಚಾವಣಿಗಳು ಹಾರಿಹೋಗಿ ಬಹಳಷ್ಟು ಹಾನಿಯಾಗಿದೆ. ಶಾಸಕ ರಾಜು ಕಾಗೆ ಶಾಲೆಗೆ ಭೇಟಿ ನೀಡಿ, ಸರ್ಕಾರದಿಂದ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 