ಕೇರಳದ ದೇವಸ್ಥಾನದಲ್ಲಿ ಉತ್ಸವದ ವೇಳೆ ರೊಚ್ಚಿಗೆದ್ದು ಓಡಾಡಿದ ಆನೆಗಳು: ಮೂವರ ಸಾವು 30ಕ್ಕೂ ಹೆಚ್ಚು ಜನರಿಗೆ ಗಾಯ
Elephants run wild during festival in Kerala temple: 3 killed, over 30 injured
ಕೋಝಿಕ್ಕೋಡ್ 14: ಕೇರಳದ ಕೊಝಿಕೋಡ್ನ ಕೊಯಿಲಾಂಡಿಯ ಕುರುವಂಗಾಡ್ನಲ್ಲಿರುವ ಮಣಕುಲಂಗರ ದೇವಸ್ಥಾನದಲ್ಲಿ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಓಡಾಡಿದ್ದರಿಂದ ಮೂವರು ಮೃತಪಟ್ಟಿದ್ದು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.
ಮೃತರನ್ನು ಕುರುವಂಗಾಡ್ ಮೂಲದ ಲೀಲಾ, ಅಮ್ಮುಕುಟ್ಟಿ ಮತ್ತು ರಾಜನ್ ಎಂದು ಗುರುತಿಸಲಾಗಿದ್ದು ಗಾಯಾಳುಗಳನ್ನು ಕೊಯಿಲಾಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡ ಶಬ್ದದೊಂದಿಗೆ ಪಟಾಕಿಗಳನ್ನು ಸಿಡಿಸಿದಾಗ ಈ ಘಟನೆ ಸಂಭವಿಸಿದೆ. ಪೀತಾಂಬರನ್ ಮತ್ತು ಗೋಕುಲ್ ಎಂಬ ಆನೆಗಳಿಂದ ಈ ಘಟನೆ ನಡೆದಿದೆ. ಪಟಾಕಿ ಪ್ರದರ್ಶನದ ಸದ್ದಿಗೆ ಹತ್ತಿರದ ಕಟ್ಟಡಗಳ ಛಾವಣಿಗಳು ಸಹ ಅಲುಗಾಡಿದವು. ಅಷ್ಟರಲ್ಲಿ ಒಂದು ಆನೆ ಒಳಗೆ ಬಂತು. ಈ ಆನೆ ಹತ್ತಿರದಲ್ಲಿ ನಿಂತಿದ್ದ ಮತ್ತೊಂದು ಆನೆಯ ಮೇಲೆ ದಾಳಿ ಮಾಡಿತು. ಮತ್ತು ನಂತರ ಎರಡು ಆನೆಗಳು ಮುಖಾಮುಖಿಯಾದವು. ಈ ವೇಳೆ ಭಯಭೀತರಾದ ಜನರು ಓಡಲು ಪ್ರಾರಂಭಿಸಿದಾಗ ಕಾಲ್ತುಳಿತವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 