ಕಾರ್ಮಿಕರಿಗೆ ಸಕಲ ಸೌಕರ್ಯ ಕಲ್ಪಿಸಿ ಕೊಡಿ: ನ್ಯಾ.ಕೃಷ್ಣ ಅಸೋಡೆ
ಬಳ್ಳಾರಿ, ಏ.15: ಮುಂಡರಗಿ ಬಳಿ ನಿಮರ್ಿಸಲಾಗುತ್ತಿರುವ ಮಹಾತ್ಮಾಗಾಂಧಿ ಟೌನ್ಶಿಪ್ ಆಶ್ರಯ ಬಡಾವಣೆಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಬುಧವಾರ ಭೇಟಿ ನೀಡಿ ಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಕಾಮರ್ಿಕರು ತಂಗಿರುವ ವಸತಿ, ಶೌಚಾಲಯ, ನೀರಿನ ವ್ಯವಸ್ಥೆ ಸೇರಿದಂತೆ ಇನ್ನೀತರ ಸೌಕರ್ಯಗಳನ್ನು ಪರಿಶೀಲಿಸಿದರು. ಕಾಮರ್ಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ನಿಮರ್ಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಸೂಚನೆ ನೀಡಿದರು.
ಈ ಲಾಕ್ ಡೌನ್ ಸಂದರ್ಭದಲ್ಲಿ ಕಾಮರ್ಿಕರಿಗೆ ಸಕಲ ಸೌಕರ್ಯಗಳನ್ನು ಕಲ್ಪಿಸಿಕೊಡಿ; ತೊಂದರೆಗೆ ಸಿಲುಕಿಸಬೇಡಿ ಎಂದು ಹೇಳಿದ ನ್ಯಾ.ಕೃಷ್ಣ ಅಸೋಡೆ ಅವರು ಕಾಮರ್ಿಕರು ಏನಾದರೂ ಸಮಸ್ಯೆಗಳಾದಲ್ಲಿ ತಮ್ಮ ಗಮನಕ್ಕೆ ತರುವಂತೆ ಕೋರಿದರು.
ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ದೊರಕುವ ಸೌಲಭ್ಯಗಳನ್ನು ಸಹ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿ ಎನ್ಸಿಸಿ ಮೈದಾನದಲ್ಲಿ ಸ್ಥಾಪಿಸಲಾಗಿರುವ ತಾತ್ಕಾಲಿಕ ಮಾರುಕಟ್ಟೆಗೂ ಭೇಟಿ ನೀಡಿ ಪರಿಶೀಲಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತದೆಯೇ ಹಾಗೂ ಏನಾದರೂ ಸಮಸ್ಯೆಗಳಿವೆಯೇ ಎಂಬುದನ್ನು ವ್ಯಾಪಾರಿಗಳಿಂದ ಹಾಗೂ ಸ್ವಯಂಸೇವಕರಿಂದ ತಿಳಿದುಕೊಂಡರು.
ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳಾದ ಅಜರ್ುನ್ ಎಸ್.ಮಲ್ಲೂರು, ಕಾಸೀಂ ಚೂರಿಖಾನ್, ಕಾಮರ್ಿಕ ಇಲಾಖೆ ಅಧಿಕಾರಿಗಳಾದ ಕಮಲ್ ಶಾ ಅಲ್ತಾಫ್ ಅಹ್ಮದ್, ಚಂದ್ರಶೇಖರ ಐಲಿ, ಕಾಮರ್ಿಕ ನಿರೀಕ್ಷಕರಾದ ಎಂ.ರವಿದಾಸ್, ಸಿ.ಎನ್.ರಾಜೇಶ್ ಸೇರಿದಂತೆ ಇತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 