ಮಾಧ್ಯಮಿಕ ಶಾಲೆ ಮಕ್ಕಳಿಗೆ ವಿಜ್ಞಾನ ಕಲಿಕೆಗೆ ಉತ್ತೇಜನ
Encouraging science learning among secondary school students
ಮಹದಾಪುರ 11 : ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಮಹದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಗಸ್ತ್ಯ ಫೌಂಡೇಶನ್ ವತಿಯಿಂದ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹದಾಪುರ ಕ್ಷೇತ್ರದ ಶಾಸಕ ಹಾಗೂ ಸಚಿವ ಎಂ.ಬಿ. ಪಾಟೀಲ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಜ್ಞಾನಾಧಾರಿತ ಕಲಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಕಲಿಕೆ ಮಕ್ಕಳಲ್ಲಿ ಹೊಸ ಆಲೋಚನೆ ಹಾಗೂ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಅಗಸ್ತ್ಯ ಫೌಂಡೇಶನ್ನ ವತಿಯಿಂದ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯವನ್ನು ಪ್ರಾಯೋಗಿಕವಾಗಿ ಕಲಿಯಲು ಅನುಕೂಲವಾಗಲಿದೆ. ವಿಜ್ಞಾನ ಕ್ಷೇತ್ರದಲ್ಲಿ ಮಕ್ಕಳ ಆಸಕ್ತಿ ಹೆಚ್ಚಿಸಿ, ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳನ್ನು ರೂಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಅಗಸ್ತ್ಯ ಫೌಂಡೇಶನ್ನ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 