ಎಲ್ಲೆಡೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ಕಾಳಜಿ ವಹಿಸಿ: ಶಾಸಕ ಮಾನೆ
Ensure that treatment is available everywhere: MLA Mane
ಲೋಕದರ್ಶನ ವರದಿ
ಎಲ್ಲೆಡೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ಕಾಳಜಿ ವಹಿಸಿ: ಶಾಸಕ ಮಾನೆ
ಹಾನಗಲ್ 03: ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕಿನ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೆಲವೆಡೆ ವೈದ್ಯರ ಕೊರತೆಯಿಂದ ಅನಾನುಕೂಲ ಉಂಟಾಗಿದ್ದು, ಲಭ್ಯ ವೈದ್ಯರನ್ನು ಕೊರತೆ ಇರುವ ಸ್ಥಳಗಳಿಗೆ ನಿಯೋಜಿಸಿ ಎಲ್ಲೆಡೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ಕಾಳಜಿ ವಹಿಸಿ ಎಂದು ಡಿಎಚ್ಒ ಡಾ.ಜಯಾನಂದ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ತಾಲೂಕಿನ ಆರೋಗ್ಯ ಇಲಾಖೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಡಿಎಚ್ಒ, ಟಿಎಚ್ಒ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತುರ್ತು ಸಂದರ್ಭದಲ್ಲಿ ಕೆಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಇರದೇ ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೂ ಹೀಗಾಗಬಾರದು. ಸಮಯಪಾಲನೆ, ಕರ್ತವ್ಯ ನಿರ್ವಹಣೆ ಮಾಡದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಿ. ತುರ್ತು ಸಂದರ್ಭದಲ್ಲಿ ಎಲ್ಲ ಕೇಂದ್ರಗಳಲ್ಲಿಯೂ ಸಹ ಪ್ರಾಥಮಿಕ ಚಿಕಿತ್ಸೆ ದೊರಕಿಸಲು ಕಾಳಜಿ ವಹಿಸಿ ಎಂದರು.
ತಾಲೂಕಿನ ಆಯುಷ್ಮಾನ ಆರೋಗ್ಯ ಉಪಕೇಂದ್ರಗಳಲ್ಲಿ ಸುರಕ್ಷಾಧಿಕಾರಿಗಳ ಕೊರತೆಯಾಗದಂತೆ ಕ್ರಮ ವಹಿಸಿ. ಈಗಾಗಲೇ ವರ್ಗಾವಣೆ ಮತ್ತು ನಿವೃತ್ತಿಯಿಂದ ತೆರವಾಗಿರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಖಾಲಿ ಪಟ್ಟಿ ತಯಾರಿಸಿಕೊಂಡು ಆದ್ಯತೆ ಮೇರೆಗೆ ವೈದ್ಯರನ್ನು ನಿಯೋಜಿಸಬೇಕು. ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಮತ್ತು ವಾಹನ ಚಾಲಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅವಶ್ಯಕತೆಗೆ ತಕ್ಕಂತೆ ಸಿಬ್ಬಂದಿ ಸೇವೆ ಪಡೆಯಲು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು. ಟಿಎಚ್ಒ ಡಾ.ಲಿಂಗರಾಜ ಕೆ.ಜಿ. ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 