ಕಬ್ಬೂರ ಕುವೆಂಪು ಶತಮಾನೋತ್ಸವ ಶಾಲೆಯಲ್ಲಿ ಪರಿಸರ ದಿನ ಆಚರಣೆ
ಹಾವೇರಿ: ಜು.08: ಹಾವೇರಿ ತಾಲೂಕಿನ ಕಬ್ಬೂರ ಗ್ರಾಮದ ಕುವೆಂಪು ಶತಮಾನೋತ್ಸವ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ವಿವಿಧ ಬಗೆಯ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ ಅವರು ಮಾತನಾಡಿ, ಶಾಲೆಯ ಶಿಕ್ಷಕರು ಮಕ್ಕಳ ಬಗ್ಗೆ ಕಾಳಜಿ ಇಟ್ಟುಕೊಂಡು ಅಕ್ಷರ ದಾಸೋಹ ಯೋಜನೆಗೆ ಅನುಕೂಲವಾಗುವ ಬಗೆ ಬಗೆಯ ಸಸಿಗಳನ್ನು ಬೆಳೆಸಲು ಮುಂದಾಗಿರುವುದು ಶ್ಲಾಘನೀಯ ಎಂದರು.
ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಅಕ್ಷರದಾಸೋಹಕ್ಕೆ ಅನುಕೂಲವಾಗಲೆಂದು ಶಾಲೆಯ ಶಿಕ್ಷರು ಸೇರಿ ತಮ್ಮ ಸ್ವಂತ ಹಣದಿಂದಲೇ ಖರೀದಿಸಿದ ತೆಂಗು, ಕರಿಬೇವು, ಲಿಂಬೆ ನುಗ್ಗೆ ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.
ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಚಂದ್ರಶೇಖರ ಭಗವಂತಗೌಡರ, ತಾಲೂಕ ದೈಹಿಕ ಶಿಕ್ಷಣ ನಿದರ್ೆಶಕ ಎನ್.ಐ ಇಚ್ಚಂಗಿ, ಶಾಲೆಯ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಮತ್ತಿತರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 