ಕಬ್ಬೂರ ಕುವೆಂಪು ಶತಮಾನೋತ್ಸವ ಶಾಲೆಯಲ್ಲಿ ಪರಿಸರ ದಿನ ಆಚರಣೆ
ಹಾವೇರಿ: ಜು.08: ಹಾವೇರಿ ತಾಲೂಕಿನ ಕಬ್ಬೂರ ಗ್ರಾಮದ ಕುವೆಂಪು ಶತಮಾನೋತ್ಸವ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ವಿವಿಧ ಬಗೆಯ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ ಅವರು ಮಾತನಾಡಿ, ಶಾಲೆಯ ಶಿಕ್ಷಕರು ಮಕ್ಕಳ ಬಗ್ಗೆ ಕಾಳಜಿ ಇಟ್ಟುಕೊಂಡು ಅಕ್ಷರ ದಾಸೋಹ ಯೋಜನೆಗೆ ಅನುಕೂಲವಾಗುವ ಬಗೆ ಬಗೆಯ ಸಸಿಗಳನ್ನು ಬೆಳೆಸಲು ಮುಂದಾಗಿರುವುದು ಶ್ಲಾಘನೀಯ ಎಂದರು.
ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಅಕ್ಷರದಾಸೋಹಕ್ಕೆ ಅನುಕೂಲವಾಗಲೆಂದು ಶಾಲೆಯ ಶಿಕ್ಷರು ಸೇರಿ ತಮ್ಮ ಸ್ವಂತ ಹಣದಿಂದಲೇ ಖರೀದಿಸಿದ ತೆಂಗು, ಕರಿಬೇವು, ಲಿಂಬೆ ನುಗ್ಗೆ ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.
ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಚಂದ್ರಶೇಖರ ಭಗವಂತಗೌಡರ, ತಾಲೂಕ ದೈಹಿಕ ಶಿಕ್ಷಣ ನಿದರ್ೆಶಕ ಎನ್.ಐ ಇಚ್ಚಂಗಿ, ಶಾಲೆಯ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಮತ್ತಿತರರು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 