ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿ: ಶಿವಯೋಗಿ ಶ್ರೀಗಳು
ಹಾವೇರಿ15 : ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ ಎಂದು ಗೌರಿಮಠದ ಷ.ಬ್ರ. ಶಿವಯೋಗಿ ಶಿವಾಚಾರ್ಯ ಶ್ರೀಗಳು ಹೇಳಿದರು.
ನಗರದ ಮಲ್ಲಿಕಾಜರ್ುನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಕರುಣಾ ಜೀವ ಕಲ್ಯಾಣ ಟ್ರಸ್ಟ್ (ರಿ)ಹಾವೇರಿ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರುಣಾ ಜೀವ ಕಲ್ಯಾಣ ಟ್ರಸ್ಟ್ನ ಸಂಚಾಲಕ ವಸಂತಕುಮಾರ ಕಡತಿ ಮಾತನಾಡಿ, ಪರಿಸರದಿಂದ ಮಾನವ ಇದ್ದಾನೆಯೇ ಹೊರತು ಮಾನವನಿಂದ ಪರಿಸರವಿಲ್ಲ. ಪ್ರತಿಯೊಬ್ಬರೂ ಮನೆಗಳ ಮುಂದೆ ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದರು.
ಉತ್ತರ ಕನರ್ಾಟಕ ಕನ್ನಡ ಕಲಾವಿದರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕುರಗೋಡಿ ಮಾತನಾಡಿ, ವಿದ್ಯಾಥರ್ಿಗಳು ಪ್ರತಿದಿನ ಸಸಿಗಳಿಗೆ ನೀರೆರೆದು ತಮ್ಮ ಪರಿಸರ ಪ್ರೀತಿ ಹಾಗೂ ಕಾಳಜಿಯನ್ನು ತೋರಬೇಕು. ಹಾಗೂ ನೆಟ್ಟ ಸಸಿಗಳು ಹಾಳಾಗದಂತೆ ಎಚ್ಚರ ವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಕರಿಬಸಯ್ಯ ಸಾಲಿಮಠ, ಈರಣ್ಣ ಕದರಮಂಡಲಗಿ, ಶಿಕ್ಷಕರು ಉಪಸ್ಥಿತರಿದ್ದರು. ನಂತರ ವಿದ್ಯಾಥರ್ಿಗಳು, ಶಿಕ್ಷಕಿಯರೊಂದಿಗೆ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 