ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಯರಗೊಪ್ಪ
ಹಾವೇರಿ 01: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅಳಿವಿನಂಚಿನಲ್ಲಿರುವ ಕಾಡುಗಳನ್ನು ರಕ್ಷಿಸಿ ಪ್ರತಿಯೊಬ್ಬರೂ ಭವಿಷ್ಯದ ಚಿಂತನೆಯಲ್ಲಿ ಇಂದಿನಿಂದಲೇ ಸಸಿ ನೆಟ್ಟು ಪರಿಸರ ಜಾಗೃತಿಯನ್ನುಂಟು ಮಾಡಬೇಕು. ಮನೆಗೊಂದು ಮರ, ವ್ಯಕ್ತಿಗೊಂದು ಸಸಿ ಜಗವೆಲ್ಲ ಖುಷಿ ಎಂಬುದನ್ನು ಎಲ್ಲರೂ ಅಳವಡಿಸಿಕೊಂಡಾಗ ಪ್ರಕೃತಿ ಸಮತೋಲನ ಕಾಯ್ದುಕೊಳ್ಳಬಹುದು. ಪ್ಲಾಸ್ಟಿಕ್ ಮುಕ್ತ ಭಾರತವನ್ನಾಗಿಸಲು ಯುವಕರು ಮತ್ತು ಪ್ರಜ್ಞಾವಂತರು ಎಲ್ಲಾ ಹಂತಗಳಲ್ಲಿ ಪರಿಸರ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದು ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದ ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ ಮಾತನಾಡಿದರು.
ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ., ಎನ್. ಎಸ್. ಎಸ್., ಇಕೋ ಕ್ಲಬ್ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಪ್ರಾಚಾರ್ಯ ಪ್ರೊ. ಜೆ. ಆರ್. ಸಿಂಧೆ, ಪ್ರೊ. ದೀಪಕ ಕೊಲ್ಲಾಪುರೆ, ಡಾ|| ಜಗದೀಶ ಹೊಸಮನಿ, ಡಾ|| ಎಂ. ಪಿ. ಕಣವಿ, ಡಾ|| ಈ. ಬಿ. ಸೇಡಂಕರ, ಪ್ರೊ. ಬಿ. ಮಲ್ಲಿಕಾಜರ್ುನಪ್ಪ, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಲೋಕಾಪುರ, ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಹಾಗೂ ವಿದ್ಯಾಥರ್ಿ-ವಿದ್ಯಾಥರ್ಿನಿಯರು ಪಾಲ್ಗೊಂಡು ಪರಿಸರ ಜಾಗೃತಿ ಪ್ರಮಾಣವಚನ ಸ್ವೀಕರಿಸಿ, ಸಸಿಗಳನ್ನು ನೆಟ್ಟರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 