ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಯರಗೊಪ್ಪ
ಹಾವೇರಿ 01: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅಳಿವಿನಂಚಿನಲ್ಲಿರುವ ಕಾಡುಗಳನ್ನು ರಕ್ಷಿಸಿ ಪ್ರತಿಯೊಬ್ಬರೂ ಭವಿಷ್ಯದ ಚಿಂತನೆಯಲ್ಲಿ ಇಂದಿನಿಂದಲೇ ಸಸಿ ನೆಟ್ಟು ಪರಿಸರ ಜಾಗೃತಿಯನ್ನುಂಟು ಮಾಡಬೇಕು. ಮನೆಗೊಂದು ಮರ, ವ್ಯಕ್ತಿಗೊಂದು ಸಸಿ ಜಗವೆಲ್ಲ ಖುಷಿ ಎಂಬುದನ್ನು ಎಲ್ಲರೂ ಅಳವಡಿಸಿಕೊಂಡಾಗ ಪ್ರಕೃತಿ ಸಮತೋಲನ ಕಾಯ್ದುಕೊಳ್ಳಬಹುದು. ಪ್ಲಾಸ್ಟಿಕ್ ಮುಕ್ತ ಭಾರತವನ್ನಾಗಿಸಲು ಯುವಕರು ಮತ್ತು ಪ್ರಜ್ಞಾವಂತರು ಎಲ್ಲಾ ಹಂತಗಳಲ್ಲಿ ಪರಿಸರ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದು ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದ ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ ಮಾತನಾಡಿದರು.
ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ., ಎನ್. ಎಸ್. ಎಸ್., ಇಕೋ ಕ್ಲಬ್ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಪ್ರಾಚಾರ್ಯ ಪ್ರೊ. ಜೆ. ಆರ್. ಸಿಂಧೆ, ಪ್ರೊ. ದೀಪಕ ಕೊಲ್ಲಾಪುರೆ, ಡಾ|| ಜಗದೀಶ ಹೊಸಮನಿ, ಡಾ|| ಎಂ. ಪಿ. ಕಣವಿ, ಡಾ|| ಈ. ಬಿ. ಸೇಡಂಕರ, ಪ್ರೊ. ಬಿ. ಮಲ್ಲಿಕಾಜರ್ುನಪ್ಪ, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಲೋಕಾಪುರ, ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಹಾಗೂ ವಿದ್ಯಾಥರ್ಿ-ವಿದ್ಯಾಥರ್ಿನಿಯರು ಪಾಲ್ಗೊಂಡು ಪರಿಸರ ಜಾಗೃತಿ ಪ್ರಮಾಣವಚನ ಸ್ವೀಕರಿಸಿ, ಸಸಿಗಳನ್ನು ನೆಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 