ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕು
ಲೋಕದರ್ಶನ ವರದಿ
ರಾಯಬಾಗ 25: ಪ.ಜಾತಿ ಕಾಲಿನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶುಕ್ರವಾರ ತಾಲೂಕಿನ ಭಿರಡಿ ಗ್ರಾಮದ ಮಾತಂಗಿಗಲ್ಲಿ ಮತ್ತು ಅಂಬೇಡ್ಕರ್ ಗಲ್ಲಿಗಳಲ್ಲಿ ಜಿ.ಪಂ. ಇಲಾಖೆಯ ಮಾದರಿ ಗ್ರಾಮ ಯೋಜನೆಯಡಿ ರೂ.75 ಲಕ್ಷರೂ ವೆಚ್ಚದಲ್ಲಿ ಪ್ಲೇವರ್ ಬ್ಲಾಕ್, ಸಿಸಿ ರಸ್ತೆ, ಚರಂಡಿ, ಹೈಮಾಸ್ ವಿದ್ಯುತ್ ಬಲ್ಬ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದಲ್ಲಿ ಪ್ರವಾಹ ಮತ್ತು ಮಳೆಯಿಂದ ಅಪಾರ ಹಾನಿಯಾಗಿದ್ದು, ಸಂತ್ರಸ್ತರಿಗೆ ಸರಕಾರದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಯತ್ನಿಸುವುದಾಗಿ ಹೇಳಿದರು. ತಾ.ಪಂ.ಸದಸ್ಯ ಶ್ರೀಧರ ಕುಡಚೆ, ಮಹಾದೇವ ಬೊರಗಾಂವೆ, ಸದಾನಂದ ಹಳಿಂಗಳಿ, ಸದಾಶಿವ ಘೋರ್ಪಡೆ, ರಾಮು ನಿಶಾನಂದಾರ, ಗ್ರಾ.ಪಂ.ಅಧ್ಯಕ್ಷ ಮುರಘೇಂದ್ರ ನಿಶಾನಂದಾರ, ಸುಭಾಷ ನಡೋಣಿ, ಬಸವರಾಜ ಮೇತ್ರಿ, ಕೆಂಪಣ್ಣ ಮೈಶಾಳೆ, ಸುಭಾಷ ಬನಗೆ, ಕಲ್ಮೇಶ ನಡವಣಿ, ನಿಂಗಣ್ಣ ಮಿರ್ಜೆ, ಶಿವು ಮಗದುಮ್ಮ ಸೇರಿದಂತೆಗ್ರಾಮಸ್ಥರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 