ಉಚಿತ ಮಧುಮೇಹ ತಪಾಸಣಾ ಶಿಬಿರಕ್ಕೆ ಉತ್ತಮ ಸ್ಪಂದನೆ
Excellent response to free diabetes screening camp
ಲೋಕದರ್ಶನ ವರದಿ
ವಿಜಯಪುರ 17: ಆರೋಗ್ಯವೇ ನಮ್ಮ ಅತ್ಯಮೂಲ್ಯ ಸಂಪತ್ತು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಎಲ್.ಡಿ.ಆರಿ್ಬ. ಸಿಪಿಐ ಕಲ್ಲಣಗೌಡ ಪಾಟೀಲ ಹೇಳಿದರು. ನಗರದ ಶಿಕಾರಖಾನೆ ಸ್ಟೇಷನ್ ಬ್ಯಾಕ್ರೋಡ್ನ ಚೌಧರಿ ಆಸ್ಪತ್ರೆ ಸಮೀಪದ ಧನ್ವಂತರಿ ಕ್ಲಿನಿಕ್ನಲ್ಲಿ ಆಯೋಜಿಸಿದ್ದ ಉಚಿತ ಮಧುಮೇಹ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
"ದೈನಂದಿನ ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ನಿರ್ಲಕ್ಷಿಸುವುದು ಸಾಮಾನ್ಯವಾಗಿದೆ. ಆದರೆ ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಧನ್ವಂತರಿ ಕ್ಲಿನಿಕ್ ಆಯೋಜಿಸಿರುವ ಉಚಿತ ತಪಾಸಣಾ ಶಿಬಿರ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉತ್ತಮ ಪ್ರಯತ್ನವಾಗಿದೆ" ಎಂದು ಹೇಳಿದರು.
ಶಿಬಿರದಲ್ಲಿ ಮಧುಮೇಹ ತಪಾಸಣೆ, ವೈದ್ಯರ ಸಲಹೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಸಂದರ್ಭದಲ್ಲಿ ಧನ್ವಂತರಿ ಕ್ಲಿನಿಕ್ನ ವೈದ್ಯಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಗಂಗನಹಳ್ಳಿ, ಸಂಗಮೇಶ್ ಜಾಧವ, ಸಿ.ಎಂ. ಗಂಗನಹಳ್ಳಿ, ಗೆಟ್ ವೆಲ್ ಲ್ಯಾಬೊರೇಟರಿಯ ಮುಖ್ಯಸ್ಥ ಕಾಂತು ಭೋಸಲೆ, ಶಿಕಾರಖಾನೆ ಪ್ರಮುಖ ಹನುಮಂತ ಚಲವಾದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 