ಅಬಕಾರಿ ದಾಳಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ
ಲೋಕದರ್ಶನ ವರದಿ
ವಿಜಯಪುರ 19: ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ವಾರ್ಡ ನಂ.20 ರ ಸಿಸಮಡ್ಡಿ ತಾಂಡಾದ ಮನೆಯೊಂದರ ಮೇಲೆ ಅಬಕಾರಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 60 ಸಾವಿರ ರೂ. ಮೌಲ್ಯದ ಗಾಂಜಾ ಜಪ್ತ ಮಾಡಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಂಗಲಾಬಾಯಿ ಗೋವಿಂದ ಲಮಾಣಿ ಅವರ ಮನೆಯ ಮೇಲೆ ಅಬಕಾರಿ ದಾಳಿ ನಡೆಸಿ 2.250 ಕೆ ಜಿ ಗಾಂಜಾ ಜಪ್ತಿಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಂಗಲಾಬಾಯಿ ಲಮಾಣಿ ಅವರನ್ನು ಬಂಧಿಸಲಾಗಿದೆ.
ಈ ಕುರಿತು ಜಿಲ್ಲಾ ವಿಚಕ್ಷಣಾ ದಳದ ಅಬಕಾರಿ ನಿರೀಕ್ಷಕ ಎ.ಎ.ಮುಜಾವರ ಅವರು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಅಬಕಾರಿ ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕ ಬಸವರಾಜ ಕಿತ್ತೂರ ಸಿಬ್ಬಂದಿಗಳಾದ ಎಸ್ ಎ ಹುಂಡೇಕಾರ, ಆಯ್ಆರ್ ಹಟ್ಟಿ, ಎನ್ಎ ಬಾರಾಗಣಿ, ಎಸ್ಡಿ ಜೋಶಿ, ರುದ್ರು ಕುಂಬಾರ, ವಿನೋಧ ಶಾಪೇಟಿ, ಆನಂದ ಪೂಜಾರಿ ಅವರು ಭಾಗವಹಿಸಿದ್ದರು ಎಂದು ಜಿಲ್ಲಾ ಅಬಕಾರಿ ಉಪಾಯುಕ್ತ ಎ.ರವಿಶಂಕರ ತಿಳಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 