ಹೊರ ರಾಜ್ಯದವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ.
ಬೆಂಗಳೂರು, ಮೇ 26, ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ಯಾವುದೇ ವ್ಯಕ್ತಿ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂಬ ವರದಿ ಹೊಂದಿದ್ದರೆ, ಬಂದಿದ್ದರೆ ಅಂತಹವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ,ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಬರುವವರಿಗೆ ಕಡ್ಡಾಯವಾಗಿ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು ಎನ್ನಲಾಗಿದೆ.
ಉಳಿದ ರಾಜ್ಯಗಳಿಂದ ಬರುವವರು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಸರ್ಕಾರ ಈ ಮೊದಲು ಹೇಳಿದ್ದರೂ ಇದೀಗ ಯಾವುದೇ ರಾಜ್ಯದಿಂದ ಬಂದರೂ ಅವರ ವೈದಕೀಯ ಫಲಿತಾಂಶ ವರದಿ ನೆಗೆಟಿವ್ ಎಂದು ಬಂದರೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ ಎಂದು ಹೇಳಿದೆ.ಯಾವುದೇ ರಾಜ್ಯದಿಂದ ಆಗಮಿಸುವ ವ್ಯಕ್ತಿಯು ಐಸಿಎಂಆರ್ ನಿಂದ ಅಂಗೀಕೃತವಾಗಿರುವ ಪ್ರಯೋಗಾಲಯಗಳಿಂದ ಕೊರೊನಾ ಪರೀಕ್ಷೆ ಮಾಡಿಸಿರುವ ಬಗ್ಗೆ ನೆಗೆಟಿವ್ ವರದಿ ಸಲ್ಲಿಸಿದರೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗುವುದು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 