ಬಸ್ ಪ್ರಯಾಣ ದುಬಾರಿ ಖಂಡನೆ
Expensive condemnation of bus travel
ಬಸ್ ಪ್ರಯಾಣ ದುಬಾರಿ ಖಂಡನೆ
ಹೂವಿನಹಡಗಲಿ. 03 : ರಾಜ್ಯ ಸರ್ಕಾರ ಶೇ 15 ರಷ್ಟು ಬಸ್ ದರ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದೆ.ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ ತಮ್ಮ ಸಾವಿರಾರು ಕೋಟಿ ರೂಪಾಯಿಗಳ ಆಸ್ತಿಯನ್ನು ಮಾರಾಟ ಮಾಡಿ ಗ್ಯಾರಂಟಿ ಯೋಜನೆಗೆ ಹಣ ನೀಡಲಿ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಮುಖಂಡ ಎಂ ಬಿ ಬಸವರಾಜ ಆಗ್ರಹಿಸಿದರು. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ರಾಜ್ಯದ ಖಜಾನೆಯನ್ನು ಬರಿದು ಮಾಡಿ ಬಡ ದುಡಿಯುವ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ನೀಡಿದೆ.ಶಕ್ತಿ ಗ್ಯಾರಂಟಿ ಯೋಜನೆಯಿಂದ ರಾಜ್ಯ ಸಾರಿಗೆ ನಿಗಮಗಳನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರ ಜನರ ಜೀವನದ ಜೋತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ಸದ್ಯಕ್ಕೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ.ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ವಿರುದ್ಧ ರೋಸಿ ಹೋಗಿದ್ದಾರೆ ಬರಿ ಭ್ರಷ್ಟಾಚಾರದಲ್ಲೇ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ತಮ್ಮ ಕುರ್ಚಿಗಾಗಿಯೇ ಕಾದಾಟ ನಡೆಸಿದ್ದಾರೆ.ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ನವರು ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯನ್ನೇ ತಮ್ಮ ಅಭಿವೃದ್ಧಿ ಎಂದು ಬಿಂಬಿಸಿಕೋಳ್ಳುವ ರಾಜ್ಯ ಸರ್ಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಜನರಿಗೆ ದುಬಾರಿ ದುನಿಯಾ ಮಾಡಿ ಜನತೆಯನ್ನು ಕಷ್ಟಕ್ಕೆ ಸಿಲುಕಿಸಿದ್ದಾರೆ. ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 