ಲಾಕ್ಡೌನ್ ವಿನಾಯಿತಿಯನ್ನು ರಾಮನಗರಕ್ಕೂ ವಿಸ್ತರಿಸಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ಏ.30, ಕೊರೊನಾ ವೈರಸ್ ಮುಕ್ತವಾಗಿರುವ ಜಿಲ್ಲೆಗಳಲ್ಲಿ ನೀಡಿರುವ ಲಾಕ್ಡೌನ್ ವಿನಾಯಿತಿಯನ್ನು ತಕ್ಷಣವೇ ರಾಮನಗರ ಜಿಲ್ಲೆಗೂ ಅನ್ವಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಕಾರ್ಯದರ್ಶಿಯವರಿಗೆ ಟ್ವೀಟ್ ಮೂಳಕ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆ ಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 