ಚಾರ್ಮಾಡಿ ಘಾಟ್ ನಲ್ಲಿ ವ್ಯಾಪಕ ಮಳೆ, ಉರುಳಿಬಿದ್ದ ಮರಗಳು, ಭೂ ಕುಸಿತ
ಮಂಗಳೂರು, ಆ 6 ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ.
ಘಾಟ್ ನ ಏಳನೇ ತಿರುವಿನಲ್ಲಿ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದೆ. ಮರ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಚಾರ್ಮಾಡಿಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಚಾರ್ಮಾಡಿ ಘಾಟ್ ನ ಏಳನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಎರಡು ಕಿ.ಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.
ಸ್ಥಳೀಯರು, ವಾಹನ ಸವಾರರು ಸೇರಿಕೊಂಡು ರಸ್ತೆಗೆ ಬಿದ್ದ ಮರವನ್ನು ತೆರವು ಕಾರ್ಯ ನಡೆಸಿದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 