ಪ್ರಚೋದನಾಕಾರಿ ಹೇಳಿಕೆ: ಎಐಎಂಐಎಂ ನಾಯಕನ ವಿರುದ್ಧ ಪ್ರಕರಣ
ಕಲಬುರಗಿ, ಫೆ 22 : ಇತ್ತೀಚೆಗೆ ಇಲ್ಲಿ ನಡೆದ ಸಿಎಎ ವಿರೋಧಿ ಸಭೆಯಲ್ಲಿ ಪ್ರಚೋದನಾಕಾರಿ, ಹಿಂದೂ ಸಮುದಾಯದ ವಿರುದ್ಧ ಮಾಡಿದ ಟೀಕೆಗಾಗಿ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂ) ನಾಯಕ ವಾರಿಸ್ ಪಠಾಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ .ಪೊಲೀಸ್ ಮೂಲಗಳ ಪ್ರಕಾರ, ಈ ಕುರಿತು ಮಹಿಳಾ ವಕೀಲರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಐಎಂಐಎಂ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.ಘಟನೆಯನ್ನು ಗಂಬೀರವಾಗಿ ಪರಿಗಣಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಘಟನೆಯ ಬಗ್ಗೆ ತನಿಖೆ ಮಾಡಿ ವಿವಿರ ವರದಿ ಸಲ್ಲಿಸುವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದರು.ಕಳೆದ 15 ರಂದು ನಗರದಲ್ಲಿ ನಡೆದ ಸಭೆಯಲ್ಲಿ ಎಐಎಂಐಎಂ ನಾಯಕ ತಮ್ಮ ಭಾಷಣದಲ್ಲಿ ದೇಶದ 15 ಕೋಟಿ ಅಲ್ಪಸಂಖ್ಯಾತ, ಮುಸ್ಲಿಂ ಸಮುದಾಯ ಒಗ್ಗಟ್ಟಿನಿಂದ ನಿಂತರೆ 100 ಕೋಟಿ ಹಿಂದೂ ಸಮುದಾಯವನ್ನು ಮಟ್ಟಹಾಕಬಹುದು ಎಂದೂ ವಿವಾದಾತ್ಮಕ ಹೇಳಿಕೆ ನೀಡಿ ದೊಡ್ಡ ಆಶಾಂತಿಗೆ ಕಾರಣವಾಗಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 