ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿದ್ದು ಕುರಿ ಕಾಯಲು ತೋಳ ನೇಮಿಸಿದಂತೆ: ಸಿದ್ದರಾಮಯ್ಯ
ಬೆಂಗಳೂರು, ಫೆ.14, ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ಕೊಟ್ಟಿರುವುದು "ಸಂಬಳವಿಲ್ಲದೇ ಕುರಿ ಕಾಯಲು ತೋಳವನ್ನು ನೇಮಿಸಿದಂತಾಗಿದೆ ಎಂದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.ಆನಂದ್ ಸಿಂಗ್ಗೆ ನಿಜಕ್ಕೂ ನೈತಿಕತೆ ಇರುವುದೇ ಆದಲ್ಲಿ ಅರಣ್ಯ ಇಲಾಖೆ ಖಾತೆಗೆ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದು ಅರಣ್ಯ ಕಾಯಿದೆಯಡಿ ದೂರು ದಾಖಲಾಗಿರುವ ಆನಂದ್ ಸಿಂಗ್ ಅಂತವರಿಗೆ ಅರಣ್ಯ ಇಲಾಖೆಯ ಖಾತೆ ನೀಡಿದ್ದಾರೆ. ಪ್ರಕರಣ ಎದರಿಸುತ್ತಿರುವವರನ್ನೇ ಸಚಿವರನ್ನಾಗಿ ನೇಮಿಸಿರುವುದು ಬಿಜೆಪಿ ಭ್ರಷ್ಟಾಚಾರ ಪೋಷಕ ಸರ್ಕಾರವೆನ್ನುವುದಕ್ಕೆ ಸಾಕ್ಷಿ ಎಂದು ಕುಟುಕಿದರು.ಯಡಿಯೂರಪ್ಪ ತಕ್ಷಣವೇ ಅರಣ್ಯ ಖಾತೆ ಹಿಂಪಡೆಯಬೇಕು ಇಲ್ಲವೇ ಆನಂದ್ ಸಿಂಗ್ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 