ಫಡ್ನವೀಸ್ - ಅಮಿತ್ ಶಾ ಮಹತ್ವದ ಮಾತುಕತೆ
ನವದೆಹಲಿ, ನವೆಂಬರ್ 4: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ರಾಜಕೀಯ ವಿಚಾರ ಕುರಿತು ಮಾತುಕತೆ ಮಾಡಿದ್ದಾರೆ. ಫಲಿತಾಂಶ ಪ್ರಕಟವಾಗಿ ಹತ್ತು ದಿನ ಕಳೆದರೂ ರಾಜ್ಯದಲ್ಲಿ ಸರ್ಕಾರ ರಚನೆಯಲ್ಲಿನ ಅಡಚಣೆಯನ್ನು ಗಮನದಲ್ಲಿಟ್ಟುಕೊಂಡು ಸಭೆ ನಡೆಸಲಾಗಿದೆ ಎಂದೂ ಹೇಳಲಾಗಿದೆ ಬಿಜೆಪಿ 105 ಸ್ಥಾನಗಳನ್ನು ಗಳಿಸಿದ್ದು - ಹಿಂದಿನ ವಿಧಾನಸಭಾ ಚುನಾವಣೆಗೆ ಹೋಲಿಕೆ ಮಾಡಿದರೆ ಬಿಜೆಪಿ ಗೆ 17 ಸ್ಥಾನಗಳು ನಷ್ಟವಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಧಾರಕಾರವಾಗಿ ಮಳೆಯಾಗಿ ಹಾನಿಗೊಳಗಾದ ರೈತರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ನೆರವು ಪಡೆಯಲು ಮುಖ್ಯಮಂತ್ರಿ ಅವರು ಷಾ ಅವರನ್ನು ಭೇಟಿ ಮಾಡಿದ್ದಾರೆ ಎಂದೂ ಅಧಿಕೃತ ಮೂಲಗಳು ಹೇಳಿವೆ. ಕಳೆದ ತಿಂಗಳ ಚುನಾವಣೆಯಲ್ಲಿ 56 ಸ್ಥಾನ ಪಡೆದ ಬಿಜೆಪಿಯ ಮಿತ್ರ ಶಿವಸೇನೆ ತನಗೆ ಸಮಪಾಲು ಅಧಿಕಾರ ಕೊಡಬೇಕು ಎಂದೂ ಒತ್ತಡ ಹೇರುತ್ತಲೇ ಇದೆ. ಈ ನಡುವೆ ಸೇನಾ ನಾಯಕ ಸಂಜಯ್ ರಾವತ್ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರ ಬೇಟಿಗೆ ಅನುಮತಿ ಕೋರಿದ್ದು, ಇದನ್ನು ಕೇವಲ ಸೌಜನ್ಯ ಭೇಟಿ ಎಂದೂ ಹೇಳಲಾಗುತ್ತಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 