ರಾಹುಲ್ ಗಾಂಧಿ ಅವರಿಂದ ಸುಳ್ಳು ಹೇಳಿಕೆ: ಬೊಮ್ಮಾಯಿ

ಹಾವೇರಿ 27: ಚುನಾವಣಾ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದು ಇಟ್ಟುಕೊಂಡಿದ್ದಾರೆ. ರಾಜ್ಯ ಸರ್ಕಾರ ಬಳಿ ಇರುವ ವರದಿಯನ್ನೇ ಬಿಡುಗಡೆ ಮಾಡಿಸಲಾಗದ ರಾಹುಲ್ ಗಾಂಧಿ, ದೇಶಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಮಾಡುವುದಾಗಿ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.  

ಹಾನಗಲ್ ವಿಧಾನಸಭಾ ಕ್ಷೇತ್ರದ  ಮಾರನಬೀಡ್, ಕಂಚಿನೆಗಳೂರು,ಮಲಗುಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.ಈ ರಾಜ್ಯ ಸರ್ಕಾರದವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಮಾಜಗಳ ನಡುವೆ ಸಂಘರ್ಷ ಹುಟ್ಟಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಆಯೋಗದ ವರದಿ ಪಡೆದು ಇಟ್ಡುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ದೇಶಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಮಾಡುವುದಾಗಿ ಹೇಳುತ್ತಾರೆ. ಆದರೆ, ರಾಜ್ಯದಲ್ಲಿ ವರದಿ ಪಡೆದಿದ್ದರೂ ಅದನ್ನು ಬಿಡುಗಡೆ ಮಾಡುತ್ತಿಲ್ಲ. ವರದಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿತ್ರಾರ್ಜಿತ ಆಸ್ತಿ ಮಕ್ಕಳಿಗೆ ಬರಬೇಕಾದರೆ ಶೇ 55ಅ ರಷ್ಟು ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಎನ್ಮುತ್ತಾರೆ. ಮೊದಲು ತೆರಿಗೆ ಕಟ್ಡುವ ವ್ಯವಸ್ಥೆ ಇತ್ತು. ಆಗಿನ ಪ್ರಧಾನಿ ರಾಜಿವ್ ಗಾಂಧಿ ಅವರು  ತಮ್ಮ ತಾಯಿಯ ಆಸ್ತಿ ಪಡೆಯಲು ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಅನ್ನುವ ಕಾರಣಕ್ಕೆ ಆ ಕಾಯ್ದೆಯನ್ನು ರದ್ದು ಮಾಡಿದರು. ಈಗ ರಾಹುಲ್ ಗಾಂಧಿ ಅದನ್ನು ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇವಲ ಸಮೀಕ್ದೆ ಮಾಡಯತ್ತೇವೆ ಅಂತ ಹೇಳುತ್ತಿದ್ದಾರೆ. ಅವರ ನಿಲುವು ಏನು ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.   

ನೆಹರು ಕುಟುಂಬದ ಆಸ್ತಿ ಮಾತ್ರ ಹೆಚ್ಚಳ ಹೆಚ್ಚಳ ಮಾಡಿಕೊಂಡಿದ್ದಾರೆ.ಮಹಿಳೆ ಸುರಕ್ಷಿತವಾಗಿಲ್ಲವಾಗಿದೆ.ಈ ಸರ್ಕಾರದಲ್ಲಿ ನಮ್ಮ ಹೆಣ್ಣು ಮಕ್ಕಳ ಮಾನ ಪ್ರಾಣದ ರಕ್ಷಣೆಯ ಗ್ಯಾರೆಂಟಿ ಬೇಕಿದೆ. ಕರ್ನಾಟಕ ಸುರಕ್ಷಿತವಾಗಿರಬೇಕಾದರೆ ಕಾಂಗ್ರೆಸ್ ಅನ್ನು ಕಿತ್ತು ಹಾಕಬೇಕು.ಹಾವೇರಿ ಸಂಸದ ಶಿವಕುಮಾರ ಉದಾಸಿಯವರು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದ್ದರೂ ಬೇರೆಯವರಿಗೆ ಕ್ಷೇತ್ರ ಬಿಟ್ಟುಕೊಡುವ ಮೂಲಕ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ.ಹಾವೇರಿ ಜನರು ಇಷ್ಟೊಂದು ಬಿಸಿಲು ಲೆಕ್ಕಿಸದೇ ಚುನಾವಣೆಯಲ್ಲಿ ಪಾಲ್ಗೊಳ್ಳುತ್ತಿರುವುದು ಕೇಂದ್ರದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶ ಇದೆ  ಎಂದು ಬಸವರಾಜ ಬೊಮ್ಮಾಯಿಯವರು ಹೇಳಿದರು.  

ಪ್ರಚಾರ ಸಂದರ್ಭದಲ್ಲಿ ಸಂಸದ ಶಿವಕುಮಾರ ಉದಾಸಿ, ಮಾಜಿ ಸಚಿವ ಮನೋಹರ ತಹಸೀಲ್ದಾರ, ಮಾಜಿ ಶಾಸಕ ಶಿವರಾಜ ಸಜ್ಜನ ಸೇರಿದಂತೆ ಪಕ್ಷದ ಮುಖಂಡರು,ಮಹಿಳೆಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.