ಖ್ಯಾತ ಉರ್ದು ಲೇಖಕ ಪದ್ಮಶ್ರೀ ಮುಜ್ತಾಬ ಹುಸೇನ್ ನಿಧನ
ಹೈದರಾಬಾದ್, ಮೇ 27,ಖ್ಯಾತ ಉರ್ದು ಲೇಖಕ ಮತ್ತು ಹಾಸ್ಯಗಾರ ಮುಜ್ತಾಬ ಹುಸೇನ್ ಬುಧವಾರ ಇಲ್ಲಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಉರ್ದು ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಹುಸೇನ್ ಅವರಿಗೆ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ಕೃತಿಗಳನ್ನು ಇಂಗ್ಲಿಷ್, ರಷ್ಯನ್ ಮತ್ತು ಜಪಾನೀ ಭಾಷೆಗಳಲ್ಲದೆ ಅನೇಕ ಭಾರತೀಯ ಭಾಷೆಗಳಿಗೆ ಅನುವಾದಿಸಲಾಗಿದೆ.ಉರ್ದು ದಿನ ಪತ್ರಿಕೆಗಳಲ್ಲಿ ಹುಸೇನ್ ಕೃತಿಗಳು ಮತ್ತು ಅಂಕಣಗಳು ತುಂಬಾ ಜನಪ್ರಿಯವಾಗಿದ್ದವು.ಹುಸೇನ್ ಅವರು ಹಾಸ್ಯಗಾರರಾಗಿದ್ದು, ಅನೇಕ ಹಾಸ್ಯ ಲೇಖನಗಳನ್ನು ಬರೆದಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 