ರೈತರ ಸುಗ್ಗಿಹಬ್ಬ ಸಂಕ್ರಾಂತಿ ಭಾರತೀಯ ಸಂಸ್ಕೃತಿಯ ಪರಂಪರೆ: ಡಾ.ಪ್ರವೀಣ
ಲೋಕದರ್ಶನವರದಿ
ರಾಣೇಬೆನ್ನೂರು14: ರೈತರ ಸುಗ್ಗಿ ಹಬ್ಬವೆಂದೇ ಬಿಂಬಿತವಾಗಿರುವ ಸಂಕ್ರಾಂತಿ ಆಚರಣೆಯ ಪ್ರಯುಕ್ತ ಸ್ಥಳೀಯ ಖನ್ನೂರ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಮಕ್ಕಳೊಂದಿಗೆ ಶಾಲಾ ಆಡಳಿತ ಮಂಡಳಿಯವರು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಸಂಕ್ರಾಂತಿಯ ಮಾಹಿತಿಯನ್ನು ಅನಾವರಣಗೊಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಡಾ. ಪ್ರವೀಣ ಎಂ ಖನ್ನೂರ ಹಾಗೂ ಖಜಾಂಚಿ ಡಾ. ಶೈಲಶ್ರೀ ಪಿ ಖನ್ನೂರ ಇವರುಗಳು ಧಾನ್ಯದ ರಾಶಿಗಳಿಗೆ ಪೂಜೆ ಹಾಗೂ ಗೋವುಗಳಿಗೆ ಪೂಜೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಭಕ್ತಿ ಪೂರ್ವಕವಾಗಿ ಚಾಲನೆ ನೀಡಿ ಇಂತಹ ಸುಗ್ಗಿ ಹಬ್ಬವು ರೈತರಿಗೆ ಚೈತನ್ಯ ನೀಡಲಿ, ರೈತರ ಬಾಳು ಹಸನಾಗಲಿ ಎಂದು ಆಶಿಸಿದರು.
ಪ್ರಾಂಶುಪಾಲ ಡಾ.ಮಹಾಂತೇಶ ಆರ್ ಕಮ್ಮಾರ, ಮುಖ್ಯೋಪಾದ್ಯಾಯಿನಿ ಲೀಲಾವತಿ, ತುಷಾರ ಕೊಟ್ಟುರು, ಕು.ಶ್ವೇತಾ ಮೇಲಿನಮನಿ ಕು. ಮಾನ್ಯಾ ಅಡಿವೆಪ್ಪನವರ, ಕು. ಚಂದನಾ ತಹಶೀಲ್ದಾರ, ಕು. ರಚನಾ ಬಿ ಪಾಟೀಲ, ಸಚಿತ್ ಜಿ ಕುಂದಾಪುರ ಮತ್ತಿತರರು ಭಾಗವಹಿಸಿದ್ದರು. ಅನೇಕ ವಿದ್ಯಾರ್ಥಿಗಳು ಸಂಕ್ರಾಂತಿ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾಥರ್ಿಗಳು ನಡೆಸಿದ ಸುಗ್ಗಿ ನೃತ್ಯ ಜನಮನ ಸೆಳೆಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 