ಆನೆ ದಾಳಿಗೆ ರೈತ ಬಲಿ
ಮೈಸೂರು, ನ, 10: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡು ಆನೆ ದಾಳಿಯಿಂದ ಗಾಯಗೊಂಡಿದ್ದ ರೈತನೊಬ್ಬ ಮೃಪಟ್ಟಿದ್ದಾನೆ . ಮೃತ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತನ್ನ ಜಮೀನಿನಲ್ಲಿ ಕೆಲಸದಲ್ಲಿ ನಿರತವಾಗಿದ್ದ ಸಮಯದಲ್ಲಿ ಆನೆ ಆತನ ಮೇಲೆ ದಾಳಿ ನಡೆಸಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಯೋಜವಾಗದೇ ಅವರು ಸಾವನ್ನಪ್ಪಿದ್ದಾರೆ. ಈ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಮತ್ತು ಕುಮಾರ್ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು. ಈ ನಡುವೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಸೊಲ್ಲೆಪುರ ಅರಣ್ಯ ಶ್ರೇಣಿಯಲ್ಲಿ ಶನಿವಾರ 25 ವರ್ಷದ ಆನೆಯ ಶವ ಪತ್ತೆಯಾಗಿದೆ. ನಾಗರಹೊಳೆ ಹುಲಿ ಯೋಜನೆಯ ನಿರ್ದೇಶಕ ನಾರಾಯಣಸ್ವಾಮಿ ಅವರು ಭಾನುವಾರ ಮತ್ತೊಂದು ಆನೆಯೊಂದಿಗಿನ ಜಗಳದಿಂದಾಗಿ ಈ ಸಾವು ಸಂಭವಿಸಿರಬಹದು ಎಂದು ಹೇಳಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ನಿಖರ ಕಾರಣ ಗೊತ್ತಾಗಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 