ಹೊಳಗುಂದಿ ಮಳೆಗಾಗಿ ರೈತ ಮಹಿಳೆಯರಿಂದ ಗುರ್ಜಿ ಪೂಜೆ
Farmer women perform Gurji puja for abundant rain
ಲೋಕದರ್ಶನ ವರದಿ
ಹೂವಿನಹಡಗಲಿ 19: ಗುರ್ಜಿ, ಗುರ್ಜಿ ಹಳ್ಳಾಡಿ ಬಂದೆ, ಹಳ್ಳಕೊಳ್ಳ ತೀರಿಗ್ಯಾಡಿ ಬಂದೆ, ಕಾರ ಮೇಳೆಯೋ ಕಪ್ಪತ್ತು ಮಳೆಯೋ, ಸುರಿಸುರಿ ಸುರಿಯೋ ಮಳೆಯೋ.... ಎಂದು ಗ್ರಾಮೀಣ ಪ್ರದೇಶದಲ್ಲಿ ಮಳೆಗಾಗಿ ರೈತ ಮಹಿಳೆಯರು ಪ್ರಾರ್ಥಿಸಿದರು.ಆರಂಭದಲ್ಲಿ ಸುರಿದ ಆಶಾದಾಯಕ ಮಳೆಯಿಂದಾಗಿ ರೈತರು ಹುಮ್ಮಸ್ಸಿನಿಂದ ಮುಂಗಾರಿನ ಬಿತ್ತನೆ ಮಾಡಿದ್ದು, ಈಗ ಮಳೆ ಮಾಯವಾಗಿ, ಬೇಸಿಗೆ ಕಾಲದಂತೆ ಬಿಸಿಲು ಬಿದ್ದಿದೆ. ಇದರಿಂದ ರೈತ ಸಮುದಾಯ ಸಂಕಷ್ಟಕ್ಕೆ ಈಡಾಗಿದೆ. ಹೀಗಾಗಿ ರೈತ ಮಹಿಳೆಯರು ಮತ್ತು ರೈತರ ಮಕ್ಕಳಿಂದ ಮಳೆಗಾಗಿ ಗುರ್ಜಿ ಪೂಜೆಗೆ ಮೊರೆ ಹೋಗಿದ್ದಾರೆ. ರೊಟ್ಟಿಯ ಹೆಂಚನ್ನು ಬಾಲಕ ವಿ.ಅಂಬರೀಶ್ ತಲೆಯ ಮೇಲೆ ಹೊತ್ತು ಸೆಗಣಿಯಿಂದ ಗುರ್ಜಿ ಮಾಡಿ ಹೆಂಚಿನ ಮೇಲೆ ಇಟ್ಟು ಓಣಿ ಓಣಿ ತಿರುಗಿದರು.
ವಿಶಿಷ್ಟ ರೀತಿಯಲ್ಲಿ ಹಾಡುತ್ತ ಪರಸ್ಪರ ನೀರು ಎರಚಿಕೊಳ್ಳುತ್ತ, ಪರಿಪರಿಯಾಗಿ ಮಳೆರಾಯನನ್ನು ಪ್ರಾರ್ಥಿಸಿದರು. ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ,ಹೈಬ್ರೀಡ್ ಜೋಳ ಸೇರಿದಂತೆ ಅನೇಕ ಬೆಳೆಗಳನ್ನು ಭೂಮಿ ಒಡಲಲ್ಲಿ ಬಿತ್ತನೆ ಮಾಡಲಾಗಿದ್ದು ತೇವಾಂಶ ಕೊರತೆಯಿಂದಾಗಿ ಬೀಜ ಮೊಳಕೆ ಒಡೆದು ಬಾಡುತ್ತಿದೆ. ದುಬಾರಿ ಬೀಜ ಗೊಬ್ಬರ ತಂದು ಭೂಮಿಗೆ ಹಾಕಿದ್ದು ನಾಲೈದು ದಿನದಲ್ಲಿ ಮಳೆ ಆಗದಿದ್ದರೆ ಮೊಳಕೆಯ ಬೀಜ ಕಮರಿ ಹೋಗುತ್ತವೆ ಎಂದು ರೈತ ಮಹಿಳೆರಾದ ಸಿದ್ಲಿಂಗಮ್ಮ, ನೇವಾರ ಮಲ್ಲಮ್ಮ, ಮುದೇಗೌಡ್ರ ರತ್ನಮ್ಮ, ಸುಶೀಲಮ್ಮ, ಬಡಿಗೇರ ರೇಖಾ, ಹೆಚ್.ಎಂ. ಅಕ್ಕಮ್ಮ ಎಂದು ಆತಂಕ ವ್ಯಕ್ತಪಡಿಸಿದರು.ಮಳೆದೇವ ಮಳೆ ಸುರಿಸುವಂತೆ ಪ್ರಾರ್ಥನೆ ಮಾಡಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 