ರೈತರ ಸ್ಥಿತಿಗತಿ ಅವಲೋಕನ: ಏ.6 ರಿಂದ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ
ಬೆಂಗಳೂರು,
ಏ 5,ಕೋವಿಡ್-19 ಲಾಕ್ಡೌನ್ ನಿಂದ ರೈತರಿಗಾಗಲೀ ರೈತರ ಪರಿಕರ
ಮಾರುಕಟ್ಟೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ
ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ
ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ
ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು
ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಏ .6 ರಿಂದ 11 ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ.ಸಚಿವರು
ಏ.6 ರ ಸೋಮವಾರದಂದು ಧಾರವಾಡ, ಬೆಳಗಾವಿ, ಬಾಗಲಕೋಟೆ 7ರಂದು ಬಿಜಾಪುರ, ಕಲಬುರಗಿ,
ಬೀದರ್ ಏ.8ರಂದು ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ 9ರಂದು ಗದಗ್,
ಹಾವೇರಿ ಏ.10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ 11 ರಂದು ಮೈಸೂರು, ಚಾಮರಾಜನಗರ,
ಮಂಡ್ಯ, ರಾಮನಗರ ಈ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಜಿಲ್ಲೆಯ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,
ತೋಟಗಾರಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾಇಲಾಖೆಗಳ ಜೊತೆ
ಸಭೆ ನಡೆಸಲಿದ್ದಾರೆ.ಸಭೆಯಲ್ಲಿ ರೈತರು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ
ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ
ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 