ರೈತರು ನರಳುತ್ತಿದ್ದಾರೆ, ಆದರೆ ದೆಹಲಿ ವೈಭವೀಕರಣಕ್ಕೆ ಸರ್ಕಾರ ಮುಂದಾಗಿದೆ : ಪ್ರಿಯಾಂಕಾ
ನವದೆಹಲಿ, ಅ 26: ಸಂಸತ್ತಿನಿಂದ ಇಂಡಿಯಾ ಗೇಟ್ ವರೆಗಿನ ಪ್ರದೇಶದ ವೈಭವೀಕರಣಕ್ಕೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ 12,750 ಕೋಟಿ ರೂ ಗಳನ್ನು ನೀಡಲು ಮುಂದಾಗಿದೆ, ಆದರೆ ಕಬ್ಬು ಬೆಳೆಗಾರರ 7000 ರೂ ಬಾಕಿ ಪಾವತಿಸಲು ನಿರಾಕರಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾ ಗಾಂಧಿವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಗಳಲ್ಲಿ ಅವರು, ದೆಹಲಿಯ ಐತಿಹಾಸಿಕ ಭವ್ಯ ಪ್ರದೇಶವಾದ ಸಂಸತ್ ನಿಂದ ಇಂಡಿಯಾ ಗೇಟ್ ವರೆಗಿನ ಪ್ರದೇಶದ ಅಂದ ಚೆಂದ ಹೆಚ್ಚಿಸಲು ಗುಜರಾತ್ ಕಂಪೆನಿಗೆ ಗುತ್ತುಗೆ ನೀಡಿದ್ದಾರೆ. ರೈತರ ಬಾಕಿ ಪಾವತಿಸಲು ಕ್ರಮ ಕೈಗೊಳ್ಳುವ ಬದಲು ಸೌಂದರೀಕರಣಕ್ಕೆ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಆರೋಪಿಸಿದ್ದಾರೆ.
ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮುಂದೊಂದು ದಿನ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಹಮದಾಬಾದ್ ಮೂಲದ ಕಂಪೆನಿಗೆ ದೆಹಲಿಯ ಐತಿಹಾಸಿಕ ಪ್ರದೇಶಕ್ಕೆ ಹೊಸ ರೂಪ. ನೀಡುವ ಸಂಬಂಧ ಟೆಂಡರ್ ನೀಡಿರುವುದಾಗಿ ಶುಕ್ರವಾರವಷ್ಟೇ ಸರ್ಕಾರ ತಿಳಿಸಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 