ರೈತರಿಗೆ ಸೌರ ವಿದ್ಯುತ್ ಕೀಟನಾಶಕ ಯಂತ್ರ ಒದಗಿಸಬೇಕು: ಸಂಶೋಧಕ ಎಂ.ಜಿ. ಕರಿಬಸಪ್ಪ
ಬೆಂಗಳೂರು, ಜ 28 : ಸಹಾಯಧನದ ಮೂಲಕ ರೈತರಿಗೆ ಎಂಜಿಕೆ ಸೋಲಾರ್ ಕೀಟನಾಶಕ ಯಂತ್ರ ಒದಗಿಸಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆಯ ಸಂಶೋಧಕ ಎಂ.ಜಿ.ಕರಿಬಸಪ್ಪ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷಗಳ ಹಿಂದೆ ತಾವು ಸೌರ ವಿದ್ಯುತ್ ಸೌಲಭ್ಯ ಹೊಂದಿರುವ ಕೀಟನಾಶಕ ಯಂತ್ರ ಸಂಶೋಧನೆ ಮಾಡಿದ್ದು, ಇದುವರೆಗೂ ರೈತರಿಗೆ 6 ಸಾವಿರ ಕೀಟನಾಶಕ ಯಂತ್ರವನ್ನು ಹಂಚಲಾಗಿದೆ. ಇದರಿಂದ ತರಕಾರಿ ಮತ್ತು ಹಣ್ಣಿನ ಬೆಳೆಗಳಲ್ಲಿ ಕೀಟನಾಶಕಗಳ ಬಳಕೆ ಇಲ್ಲದೇ ಬೆಳೆ ಬೆಳೆಯಲು ಸಾಧ್ಯವಾಗಿದೆ. ಜತೆಗೆ ರೈತರಿಗೆ ಹಣ ಉಳಿತಾಯವಾಗುತ್ತಿದೆ ಎಂದರು.
ಇದರಿಂದ ಹಣ್ಣು, ತರಕಾರಿ ಬೆಳೆಗಳು ವಿಷಮುಕ್ತವಾಗಿ ಗ್ರಾಹಕರಿಗೆ ದೊರೆಯಲಿದ್ದು, ಜನ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ. ಈಗಾಗಲೇ 12 ಜಿಲ್ಲೆಗಳಲ್ಲಿ ಕೃಷಿ ಇಲಾಖೆ ಆತ್ಮಯೋಜನೆಯಡಿ ಕೆಲವು ರೈತರಿಗೆ ಉಚಿತವಾಗಿ ಕೀಟನಾಶಕ ಯಂತ್ರ ನೀಡಿದೆ. ಇವುಗಳ ಬಳಕೆಯಿಂದ ರೈತರಿಗೂ ಉತ್ತಮ ಫಲಿತಾಂಶ ದೊರೆತಿದೆ ಎಂದರು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ರೈತರಿಗೆ ಉಚಿತವಾಗಿ ಸೋಲಾರ ಯಂತ್ರ ವಿತರಿಸಬೇಕೆಂದು ಅವರು ಒತ್ತಾಯಿಸಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅರುಣಕುಮಾರ ಕುರಡಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 