ಮೆಣಸಿನಕಾಯಿ ಬೆಲೆ ಕುಸಿತ ಬೆಳೆ ನಾಶ ಪರಿಹಾರಕ್ಕೆ ರೈತರ: ರಾಮಣ್ಣ ತಳವಾರ ಒತ್ತಾಯ
Farmers urged to seek compensation for crop damage due to fall in chilli prices: Ramanna Talawara
ಲಕ್ಷ್ಮೇಶ್ವರ 29: ತಾಲೂಕಿನ ಶಿಗ್ಲಿ ಗ್ರಾಮದ ರೈತ ರಾಮಣ್ಣ ತಳವಾರ ಅವರು ಬೆಳೆದಿದ್ದ ನಾಲ್ಕು ಏಕರೆ ಮೆಣಸಿನಕಾಯಿ ಬೆಳೆಗೆ ನಿಗದಿತ ಬೆಲೆ ಸಿಗದ ಹಿನ್ನೆಲೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ತಿಂಗಳ ಪರಿಶ್ರಮದಿಂದ ಬೆಳೆದಿದ್ದ ಮೆಣಸಿನಕಾಯಿ ಬೆಳೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ನಷ್ಟಕ್ಕೆ ಗುರಿಯಾಗಿದೆ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಲ ಮಾಡಿ ಬೆಳೆ ಬೆಳೆದಿದ್ದ ರೈತ ರಾಮಣ್ಣ ತಳವಾರ ಅವರಿಗೆ ಖರ್ಚು ಮಾಡಿದ ಹಣವೂ ಮರಳಿ ಬಾರದ ಸ್ಥಿತಿ ನಿರ್ಮಾಣವಾಗಿದ್ದು, ಬೇಸರಗೊಂಡ ಅವರು ತಮ್ಮ ಹೊಲದಲ್ಲಿದ್ದ ಎಲ್ಲಾ ಮೆಣಸಿನಕಾಯಿ ಬೆಳೆಯನ್ನು ಹರಿದು ಹಾಕಿ ತಮ್ಮ ಬೇಸರವನ್ನು ವ್ಯಕ್ತಪಡಿಸಿರುವ ಘಟನೆ ನಡೆದಿದ್ದು ರೈತರ ಸಂಕಷ್ಟದ ನೈಜ ಚಿತ್ರಣವಾಗಿದ್ದು, ಸರ್ಕಾರ ತಕ್ಷಣ ರೈತರ ಸಮಸ್ಯೆಗೆ ಸ್ಪಂದಿಸಿ ಸೂಕ್ತ ಬೆಂಬಲ ಬೆಲೆ ಹಾಗೂ ಪರಿಹಾರ ನೀಡಬೇಕು ಎಂದು ರೈತ ಮುಖಂಡರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು 