ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ
Farmers visit the local village administrative officer's office
ಬೆಟಗೇರಿ 24 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಾರ್ವಜನಿಕರು ಮತ್ತು ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ ನೀಡಿ ನಿಮ್ಮ ಕೃಷಿ ಜಮೀನು ಮಾಲೀಕ ಮರಣ ಹೊಂದಿದ್ದರೆ, ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಗೌಡಪ್ಪ ಸಸಾಲಟ್ಟಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೌತಿ/ವಾರಸಾ ಖಾತೆ ಆಂದೋಲನದಡಿಯಲ್ಲಿ ತಮ್ಮ ಕೃಷಿ ಜಮೀನನ ಮಾಲೀಕರು ನಿಧನರಾಗಿದ್ದರೆ, ತಮ್ಮ ಕುಟುಂಬದ ಉತ್ತರಾಧಿಕಾರಿಗಳ ಹೆಸರಿಗೆ ತಮ್ಮ ಜಮೀನು ಬದಲಾವಣೆ ಮಾಡಿಕೊಳ್ಳಬೇಕು. ಸರ್ಕಾರದಿಂದ ದೊರಕುವ ವಿವಿಧ ಸಹಾಯ, ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುತ್ತೆದೆ. ತಮ್ಮ ಜಮೀನು ಮಾಲೀಕ ಮರಣ ಹೊಂದಿದ್ದರೆ ತಕ್ಷಣ ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಇ ಪೌತಿ ಖಾತೆ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 