ಆರ್.ಅಶೋಕ್ ಮುಂದೆಯೇ ವಿಷ ಸೇವಿಸಿದ ರೈತರು
Farmers who consumed poison in front of R. Ashok
ರಾಮನಗರ 16: ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಭೂಸ್ವಾಧೀನ ಮಾಡಲು ಮುಂದಾಗಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ವೇಳೆ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲೇ ಕೆಲ ರೈತರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಚಿಕ್ಕಬೈರಮಂಗಲದ ನಾಗೇಶ್ ಕುಮಾರ್, ರಮ್ಯಾ ಆತ್ಮಹತ್ಯೆಗೆ ಯತ್ನಿಸಿದವರು. ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ಮುಖಂಡರು ಮಂಗಳವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಮಾತನಾಡುತ್ತಿದ್ದ ಸಮಯದಲ್ಲಿ ತಮ್ಮ ನೋವನ್ನು ತೋಡಿಕೊಂಡ ಮಹಿಳೆ, ನಮ್ಮ ಭೂಮಿ ಕಸಿದು ಕೊಂಡರೆ ನಮಗೆ ಸಾಯುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ತಂದಿದ್ದ ವಿಷವನ್ನು ಸೇವಿಸಿದರು.
ನಾಗೇಶ್ ಕುಮಾರ್ ವಿಷ ಸೇವಿಸಿ ಅಸ್ವಸ್ಥಗೊಂಡರೆ, ರಮ್ಯಾ ವಿಷಸೇವನೆಗೆ ಮುಂದಾಗುತ್ತಿದ್ದಂತೆ ಸುತ್ತಲೂ ಇದ್ದ ಜನತೆ ವಿಷದ ಬಾಟಲಿಯನ್ನು ಕಸಿದು ಕೊಂಡರು. ವಿಷ ಸೇವಿಸಿದ ನಾಗೇಶ್ ಕುಮಾರ್ ಅವರನ್ನು ಬೈರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈತರಿಗೆ ಸಾಂತ್ವನ ಹೇಳಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ನಿಮ್ಮೊಂದಿಗೆ ನಾವಿರುತ್ತೇವೆ. ಧೈರ್ಯಗೆಡಬೇಡಿ. ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ದುಡುಕು ನಿರ್ಧಾರ ತಳೆಯಬೇಡಿ. ಸರ್ಕಾರದ ವಿರುದ್ಧ ಹೋರಾಟ ಮಾಡಿ ನ್ಯಾಯ ಪಡೆಯೋಣ ಎಂದು ರೈತರಿಗೆ ಧೈರ್ಯತುಂಬಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 