ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ

ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ Fatal attack on young man with sword: Hospitalized, atmosphere of hatred

ಸಂಕೇಶ್ವರ : ಅನಾಮಧೇಯ ವ್ಯಕ್ತಿಗಳ ತಂಡವು ಯುವಕನೋರ್ವನ ಮೇಲೆ ತಲವಾರದಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸಂಕೇಶ್ವರ ಪಟ್ಟದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. 

    ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು ಯುವಕನ ಕೈ ಹಾಗೂ ಕುತ್ತಿಗೆಯ ಭಾಗಕ್ಕೆ ತಲವಾರದಿಂದ ಮಾರಣಾಂತಿಕ ಹಲ್ಲೆ ಮಾಡಿ ಹಲ್ಲೆಕೋರರು ಫರಾರಿ ಆಗಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೆ ಕಾರಣ ಎನೇಂದು ತಿಳಿದಿಲ್ಲ. ಆದರೆ ಹಲ್ಲೆಕೋರರು ಗುಂಪು ಇತ್ತು ಎಂದು ಹೇಳಲಾಗಿದೆ. 

    ವಿಷಯ ತಿಳಿಯುತಿದ್ದಂತೆ ಹಲವಾರು ಪೊಲೀಸರೊಂದಿಗೆ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿರುವದು ವರದಿಯಾಗಿದೆ.