ನಿವೃತ್ತ ಮುಖ್ಯ ಶಿಕ್ಷಕ ಎಲ್.ಆರ್. ಕೆಲವಡಿ ಅವರಿಗೆ ಅಭಿನಂದನಾ ಸಮಾರಂಭ
Felicitation ceremony for retired Headmaster L.R. Kelavadi
ಕೋಲಾರ 10: ಪಟ್ಟಣದ ಸಮುದಾಯ ಭವನದಲ್ಲಿ ವಿವಿಧ ಸಂಘಟನೆಗಳು ಹಾಗೂ ಪಟ್ಟಣದ ಗುರುಹಿರಿಯರ ನೇತೃತ್ವದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಎಲ್.ಆರ್. ಕೆಲವಡಿ ಅವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ದೇಸಾಯಿ, “ಸರ್ಕಾರಿ ಕೆಲಸವೆಂದರೆ ದೇವರ ಕೆಲಸ ಎಂಬ ಭಾವನೆ ಎಲ್ಲ ನೌಕರರಲ್ಲೂ ಇರಬೇಕು. ಅದರಲ್ಲೂ ಶಿಕ್ಷಕರ ಕಾರ್ಯವು ಉತ್ತಮ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿದೆ. ಆದ್ದರಿಂದ ಶಿಕ್ಷಕರು ತಮ್ಮ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು” ಎಂದು ಕಿವಿಮಾತು ಹೇಳಿದರು.
ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಾ ಕಲಬುರಗಿ, ಶಿಕ್ಷಣ ಇಲಾಖೆಯ ಎಲ್ಲ ಸಿಬ್ಬಂದಿಯೂ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದರ ಜೊತೆಗೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಘವೇಂದ್ರ ಬಡಿಗೇರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೀನೀತ ದೇಸಾಯಿ, ಎಚ್.ಜಿ. ಮಿರ್ಜಿ, ಸಿ.ಆರ್. ಓಣಿ, ಟಿ.ಟಿ. ಹಗೆದಾಳ, ಶರಣು ಸಾಹುಕಾರ, ಪೀರಮಹ್ಮದ್ ಗಿರಗಾಂವಿ, ಸುನೀಲ್ ನಾಯಕ್, ವಿ.ಎಚ್. ಪುರೋಹಿತ್, ಶಿವಶರಣ ತಡಲಗಿ, ಸಂಗಮೇಶ ಜಂಗಮ ಶೆಟ್ಟಿ, ಆನಂದ ಪವಾರ್, ಎಂ.ಎಚ್. ಜಮುನ, ಟಿ.ಪಿ. ದಳವಾಯಿ, ಅಶೋಕ ಗಿಡ್ಡಪ್ಪಗೋಳ, ಜಿ.ಜಿ. ಕುಲಕರ್ಣಿ, ಶ್ರೀಕಾಂತ ಪಾರಗೋಂಡ, ಕೃಷ್ಣಾ ರಾಜಪೂತ, ಟಿ.ಕೆ. ಮಕಾನದಾರ, ಎನ್.ಎ. ಬನಸೋಡೆ, ಬಸವರಾಜ ಮಮದಾಪೂರ, ಆರ್.ಎಸ್. ಗಿಡ್ಡಪ್ಪಗೋಳ, ಬಿ.ಎಸ್. ಹಂಗರಗಿ ಹಾಗೂ ಬಿ.ಎಸ್. ನಿಂಬಾಳ್ಕರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಶಿಕ್ಷಕರು ಹಾಗೂ ಗುರುಹಿರಿಯರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 