ಅರುಣ ದುರ್ಯೋಧನ ಐಹೊಳೆಗೆ ಸನ್ಮಾನ
Felicitation to Arun Duryodhana Aihole
ರಾಯಬಾಗ 08: ಚಿತ್ರದುರ್ಗದ ಶ್ರೀ ಮಾದರ ಚೆನ್ನಯ್ಯ ಗುರು ಪೀಠದ ಡಾ.ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಯವರು ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ಅರುಣ ದುರ್ಯೋಧನ ಐಹೊಳೆ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಶನಿವಾರ ಪಟ್ಟಣದ ಆದರ್ಶ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಅರುಣ ಐಹೊಳೆಯವರನ್ನು ಸತ್ಕರಿಸಿದರು.
ಬಳಿಕ ಮಾತನಾಡಿದ ಶ್ರೀಗಳು, ಮಾದರ ಚೆನ್ನಯ್ಯ ಗುರು ಪೀಠದ ಡಾ.ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಯವರು, ಮಾದರ ಚೆನ್ನಯ್ಯ ಪರಂಪರೆಯ ಜನಾಂಗವೆಲ್ಲವು ಮೊದಲು ಸಂಸ್ಕಾರವಂತರಾಗಬೇಕು, ಶಿಕ್ಷಿತರಾಗಬೇಕು ಜೊತೆಗೆ ದೇಶ ಭಕ್ತರಾಗಬೇಕು ಎಂಬ ದೃಷ್ಟಿಕೋನದಿಂದ ಈ ಸೇವಾ ಸಮಿತಿಯನ್ನು ಹುಟ್ಟು ಹಾಕಿದ್ದಾರೆ. ಆ ನಿಟ್ಟಿನ ಜವಾಬ್ದಾರಿಯನ್ನು ಅರುಣ ಐಹೊಳೆಯವರಿಗೆ ನೀಡಿದ್ದು, ಅವರು ಗುರುಗಳು ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುದರ ಮುಖಾಂತರ ಸಮಾಜದ ಕಲ್ಯಾಣಕ್ಕಾಗಿ ಹೆಚ್ಚು ಶ್ರಮಿಸಲಿ ಎಂದು ಹಾರೈಸಿದರು.
ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಸ್ಥಾನ ಜವಾಬ್ದಾರಿ ಸ್ವೀಕರಿಸಿ ಮಾತನಾಡಿದ ಅರುಣ ಐಹೊಳೆಯವರು, ಹುಕ್ಕೇರಿ ಹಿರೇಮಠದ ಶ್ರೀಗಳು ಮತ್ತು ಚಿತ್ರದುರ್ಗದ ಡಾ.ಬಸವಮೂರ್ತಿ ಮಾದರ ಚೆನ್ನಯ್ಯ ಶ್ರೀಗಳು ನನಗೆ ಎರಡು ಕಣ್ಣುಗಳು. ಇವರು ತೋರಿಸುವ ಮಾರ್ಗದರ್ಶನದಲ್ಲಿ ನಡೆದು, ಎಲ್ಲ ಜನಾಂಗದ ಸೇವೆಗಳ ಜೊತೆಗೆ ನಮ್ಮ ಜನಾಂಗದ ಸೇವೆಯನ್ನು ರಾಜ್ಯಾದ್ಯಂತ ಮಾಡುವುದಾಗಿ ಹೇಳಿದರು.
ಡಾ.ಜೀವಂಧರ ಕೇತಪ್ಪನವರ, ಸುಶೀಲಾ ಐಹೊಳೆ,ಮನೋಹರ ಪೂಜೇರಿ, ಆರ್.ಎಮ್.ಕುರಾಡೆ, ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಸದಾನಂದ ಹಳಿಂಗಳಿ, ಎಸ್. ಎಸ್.ಕಾಂಬಳೆ, ಸಂಗನಗೌಡ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ, ಬಿ.ಬಿ.ಪೂಜಾರ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 