ಕುಮಾರ ದೇಸಾಯಿ, ಎಸ್‌.ಬಿ.ಪಾಟೀಲಗೆ ಸನ್ಮಾನ

ಸಿಂದಗಿ 26: ಕಾಂಗ್ರೆಸ್ ಯುವ ಘಟಕದ ತಾಲೂಕಾಧ್ಯಕ್ಷ ಕುಮಾರ ದೇಸಾಯಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕವಾದ ಎಸ್‌.ಬಿ.ಪಾಟೀಲ ವಕೀಲರಿಗೆ ತಾಲೂಕಿನ ಪಂಚಮಸಾಲಿ ಸಮಾಜವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಸೋಮನಗೌಡ ಬಿರಾದಾರ, ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ, ಮಿಸಲಾತಿ ಹೋರಾಟ ಸಮಿತಿ ಅದ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಗುರು ಬಸರಕೋಡ, ಶಿವರಾಜ ಪೋ. ಪಾಟೀಲ, ಸಂಗನಗೌಡ ಪಾಟೀಲ ಅಗಸಬಾಳ, ಮಲ್ಲನಗೌಡ ಪಾಟೀಲ ಇಬ್ರಾಹೀಂಪೂರ ಸೇರಿದಂತೆ ಅನೇಕರಿದ್ದರು.