ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕ
ಲೋಕದರ್ಶನ ವರದಿ
ಗುತ್ತಲ16: ಬಾರತೀಯ ಭವ್ಯ ಪರಂಪರೆಯಲ್ಲಿ ಹಬ್ಬ ಹರಿದಿನಗಳಿಗೆ ನಮ್ಮ ಪೂರ್ವಜರು ಅತ್ಯಂತ ಮಹತ್ವ ನೀಡಿ ಸಂಸ್ಕಾರ ಸಂಸ್ಕೃತಿಯ ಬೆಳಸುವಲ್ಲಿ ಶ್ರಮಿಸಿವುದರ ಜೊತೆಗೆ ಸಂಸ್ಕೃತಿ ಪ್ರತೀಕವಾಗಿದೆ ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಮೀಪದ ಮಣ್ಣೂರ ಗ್ರಾಮದ ಗದಿಗೇಶ್ವರ ವಿರೂಪಾಕ್ಷೇಶ್ವರ ಹಿರೇಮಠದಲ್ಲಿ ಮಕರಸಂಕ್ರಾಂತಿ ಪ್ರಯುಕ್ತ ಜರುಗಿದ ಇಷ್ಟಲಿಂಗ ಪೂಜೆ ಹಾಗೂ ಸಂಕ್ರಾಂತಿ ಸಂಭ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.
ಭಕ್ತರಿಂದ ಹೆಡಿಗೆ ಪರ್ವ: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಹೊಸರಿತ್ತಿ ಕೆಸರಳ್ಳ ಮಣ್ಣೂರ ನೆರಳೂರ ಗ್ರಾಮಗಳಿಂದ ಆಗಮಿಸಿದ ಸಧ್ಬಕ್ತರು ವರದಾ ನದಿಯಲ್ಲಿ ಪುಣ್ಯಸ್ಥಾನ ಮಾಡಿ ಶ್ರೀಗಳ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾದರು.
ನಂತರ ವಿವಿಧ ತೇರಾವರಿ ಹಬ್ಬದ ಖಾದ್ಯಗಳನ್ನು ಹೆಡಿಗೆ ಪರ್ವ ರೂಪದಲ್ಲಿ ಪೂಜೆಸಲ್ಲಿಸಿ ವಿತರಿಸಿದರು.
ಪರಸ್ಪರ ಎಳ್ಳು ಬೆಲ್ಲ ವಿನಿಮಯ ಮಾಡಿಕೊಂಡು ಎಳ್ಳು ಬೆಲ್ಲ ತಿಂದು ಓಳ್ಳೇಯ ಮಾತನಾಡೋಣ ಎಂದರು. ಇದಕ್ಕೂ ಪೂರ್ವದಲ್ಲಿ ಮಹಿಳೆಯರಿಂದ ಗಂಗಾ ಪೂಜೆ ನೇರೆವೇರಿಸಲಾಯಿತು.
ಗ್ರಾಮದ ಮುಖಂಡರಾದ ಚಂದ್ರಯ್ಯ ಹಿರೇಮಠ ರಮೇಶ ಮಡ್ಲೂರ ವಿರುಪಾಕ್ಷಯ್ಯ ಹಿರೇಮಠ ವಿರಪ್ಪ ತೋರಗಲ್ ಇತರರು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 