ಶ್ರೀಶಾಂತ್ ಮನೆಯಲ್ಲಿ ಬೆಂಕಿ: ಯಾವುದೇ ಪ್ರಾಣಾಪಾಯವಿಲ್ಲ
ನವದೆಹಲಿ, ಆ 24 ಭಾರತದ ಕ್ರಿಕೆಟಿಗ ಎಸ್. ಶ್ರೀಶಾಂತ್ ಅವರ ಕೊಚ್ಚಿಯಲ್ಲಿರುವ ಮನೆಗೆ ತಡರಾತ್ರಿ ಬೆಂಕಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಾಯಗೊಂಡಿರುವ ಬಗ್ಗೆ ವರದಿ ದಾಖಲಾಗಿಲ್ಲ. ಕೊಚ್ಚಿಯ ಎಡಪಲ್ಲಿಯಲ್ಲಿರುವ ಶ್ರೀಶಾಂತ್ ಅವರ ಮನೆಯ ಕೆಳಗಿನ ಮಹಡಿಯ ಹಾಲ್ ಹಾಗೂ ಬೆಡ್ ರೂಂ ಗೆ ತಡರಾತ್ರಿ 2 ರ ಸಮಯದಲ್ಲಿ ಬೆಂಕಿ ಬಿದ್ದಿತ್ತು. ಆದರೆ, ಶ್ರೀಶಾಂತ್ ಅವರು ಮನೆಯಲ್ಲಿ ಇರಲಿಲ್ಲ. ಅವರ ಪತ್ನಿ ಹಾಗೂ ಮಕ್ಕಳು ಹಾಗೂ ಇಬ್ಬರು ಕೆಲಸದವರು ಮೊದಲನೇ ಮಹಡಿಯಲ್ಲಿ ಇದ್ದರು. ಶ್ರೀಶಾಂತ್ ಅವರ ಮನೆಯಿಂದ ಹೊಗೆ ಹೊರಗಡೆ ಬರುತ್ತಿದ್ದನ್ನು ಗಮನಿಸಿದ ನೆರೆಹೊರೆಯವರು ಗಾಂಧಿನಗರ ಮತ್ತು ತ್ರಿಕಕ್ಕಾರ ಅಗ್ನಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮನೆಯ ಗ್ಲಾಸ್ ಹೊಡೆದು ಒಳ ನುಗ್ಗಿ ಶ್ರೀಶಾಂತ್ ಅವರ ಕುಟುಂಬದ ಸದಸ್ಯರನ್ನು ರಕ್ಷಿಸಿದರು. ನಂತರ, ಬೆಂಕಿಯನ್ನು ಹಾರಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 