ಟಯರ್ ಮಳಿಗೆಗೆ ಬೆಂಕಿ: ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಮಂಗಳೂರು, ಅ 17: ನಗರದ ಬುಂದೆರ್ ಪ್ರದೇಶದ ಹಿದಾಯತ್ ಸೆಂಟರ್ ಸಮೀಪದ ಟಯರ್ ಮಳಿಗೆಯೊಂದರಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ ಬೆಂಕಿ ಕಂಡಕೂಡಲೇ ಸ್ಥಳೀಯರು ಅದನ್ನು ನಂದಿಸಲು ಮುಂದಾಗಿದ್ದರಿಂದ ಕೆನ್ನಾಲಿಗೆ ಹೆಚ್ಚು ವ್ಯಾಪಿಸದೆ ಭಾರಿ ದುರಂತ ತಪ್ಪಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಲ್ಲದೆ, ಸುತ್ತಮುತ್ತಲಿನ ವಿದ್ಯುತ್ ಸರಬರಾಜು ಸಂಪರ್ಕ ಕಡಿತಗೊಳಿಸುವಂತೆ ಮೆಸ್ಕಾಮ್ ಅಧಿಕಾರಿಗಳಿಗೆ ತಿಳಿಸಿದ್ದರಿಂದ ಹೆಚ್ಚಿನ ಅನಾಹುತವಾಗಿಲ್ಲ. ಅಂಗಡಿ ಇರುವ ಈ ಸಂಕೀರ್ಣದಲ್ಲಿ 12 ಕ್ಕೂ ಹೆಚ್ಚು ಅಪಾಟರ್್ಮೆಂಟ್ಗಳಿವೆ ಮತ್ತು ಬೆಂಕಿಯಿಂದ ಅಪಾರ ಪ್ರಮಾಣದ ಪ್ರಾಣ ಮತ್ತು ಆಸ್ತಿಪಾಸ್ತಿ ನಷ್ಟವಾಗಬಹುದು. ಯುವಕರು ರಕ್ಷಣಾ ಕಾರ್ಯಾಚರಣೆಗೆ ಮುಂದಾಗದೆ ಇದ್ದಿದ್ದರೆ ಈ ಘಟನೆಯು ದೊಡ್ಡ ದುರಂತದಲ್ಲಿ ಅಂತ್ಯವಾಗಬೇಕಿತ್ತು ಎನ್ನಲಾಗಿದೆ ಶಾಟರ್್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿರುವ ಶಂಕೆಯಿದ್ದು, ಅಂಗಡಿ ಮಾಲೀಕರಿಗೆ ಆರು ಲಕ್ಷ ರೂ. ನಷ್ಟವಾಗಿದೆ ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 