ಅಗ್ನಿದುರಂತ: ಅಗ್ನಿಶಾಮಕ ಸಿಬ್ಬಂದಿಗೂ ಗಾಯ
Fire disaster: Firefighter also injured
ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭ"ಸಿದ್ದು, ಹಾರ್ಡ್ವೇರ್ ಗೋದಾ"ುನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಇರುವ ಹಾರ್ಡ್ವೇರ್ ಗೋಡೌನ್ಗೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 175 ಅಂಗಡಿ ಮಳಿಗೆಗಳಿದ್ದವು.
ಕೆಳಮಹಡಿಯಲ್ಲಿನ ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು, ಮೇಲಿನ ಅಂತಸ್ತುಗಳಿಗೆ ವ್ಯಾಪಿಸಿದೆ. ಕಟ್ಟಡದಲ್ಲಿ ಪ್ಲಾಸ್ಟಿಕ್, ಫ್ಯಾನ್ಸಿ ಸಾಮಗ್ರಿಗಳು, ಬಟ್ಟೆ ಹಾಗೂ ಸುಡುವಂತಹ ಇತರೆ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ಹರಡಿದೆ. ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ.
ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾುಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ಕುಂಬಾರಪೇಟೆ ಪ್ರದೇಶದ ಕಿರಿದಾದ ರಸ್ತೆಗಳಿಂದಾಗಿ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಸವಾಲಾಗಿದೆ.
ಸುತ್ತಮುತ್ತಲಿನ ಪ್ರದೇಶದಲ್ಲಿ "ದ್ಯುತ್ ಕಡಿತಗೊಳಿಸಲಾಗಿದೆ. ಈ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭ"ಸಿದೆ. ಇನ್ನು ಬೆಂಕಿ ನಂದಿಸಲು ಕಟ್ಟಡದೊಳಗೆ ಹೋಗಿದ್ದ ಅಗ್ನಿಶಾಮಕ ಸಿಬ್ಬಂದಿಗಳೂ ಕೂಡ ಬೆಂಕಿಯಲ್ಲಿ ಸಿಲುಕಿದ ಘಟನೆ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 