ಸೆಟ್ನಲ್ಲಿ ಬೆಂಕಿ: ಆಂಜನೇಯನೇ ನಮ್ಮನ್ನು ಕಾಪಾಡಿದ್ದಾನೆ- ಶಿವರಾಜ್ ಕುಮಾರ್
ನೆಲಮಂಗಲ, ಜ 16: ಆಂಜನೇಯ ನಮ್ಮ ಜೊತೆಗಿದ್ದರಿಂದ ಇಂದು ನಮ್ಮನ್ನು ಕಾಪಾಡಿದ್ದಾನೆ ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಭಜರಂಗಿ - 2 ಚಿತ್ರದ ಚಿತ್ರೀಕರಣದ ವೇಳೆ ಅಗ್ನಿ ಅವಘಡ ಸಂಭವಿಸಿದ ಕುರಿತು ಮಾತನಾಡಿದ ಅವರು, ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ. ಗ್ಯಾಸ್ ಓಪನ್ ಆಗಿದ್ದರೆ ತುಂಬಾ ದೊಡ್ಡ ಅವಘಡ ಸಂಭವಿಸುತ್ತಿತ್ತು, ಆದರೆ, ಸೆಟ್ ಗೆ ಗೋಣಿಚೀಲ ಬಳಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದರು.
ಚಿತ್ರೀಕರಣದಲ್ಲಿ ತಾವು ಸೇರಿ 15 ರಿಂದ 20 ಜನ ಮುಖ್ಯ ಕಲಾವಿದರು ಹಾಗೂ ಸರಿಸುಮಾರ 200 ಜನ ಸಹಾಯಕ ಕಲಾವಿದರು ಇದ್ದರು. ಆದರೆ, ಯಾರೊಬ್ಬರಿಗೂ ಯಾವುದೇ ಹಾನಿ ಆಗಿಲ್ಲ, ಅನಾಹುತನೂ ಆಗಿಲ್ಲ. ಇಂದು ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ ಎಂದರು.
ಚಿತ್ರಕ್ಕೆ ಭಜರಂಗಿ ಹೆಸರಿಟ್ಟಿರುವುದರಿಂದ ಯಾವುದೇ ಅನಾಹುತವಾಗಿಲ್ಲ. ಆಂಜನೇಯ ನಮ್ಮ ಜೊತೆ ಇದ್ದಾನೆ ಎಂದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 