ಹಾವೇರಿ, 02: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಹಾವೇರಿ ಜಿಲ್ಲಾ ಶಾಖೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಪ್ರಥಮ ಚಿಕಿತ್ಸಾ ಜಾಗೃತಿ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಭಾರತೀಯ ರೆಡ್ ಕ್ರಾಸ್ನ ಜಿಲ್ಲಾ ಗೌರವ ಕಾರ್ಯದರ್ಶಿ ಡಾ. ನೀಲೇಶ್ ಎಂ. ಎನ್. ಸಹ ಗೌರವಕಾರ್ಯದರ್ಶಿ ನಿಂಗಪ್ಪ ಆರೇರ, ಖಜಾಂಚಿ ಪ್ರಭು ಹಿಟ್ನಳ್ಳಿ, ಸದಸ್ಯರಾದ ಉಡಚಪ್ಪ ದುಳಗಿ, ನೋಡಲ್ ಅಧಿಕಾರಿ ಪೂರ್ಣಿಮಾ ಮಠದ, ಸಂಪನ್ಮೂಲ ವ್ಯಕ್ತಿಗಳಾದ ಡಾಽಽ ಅಂಕಿತ್ ಆನಂದ, ಡಾ. ಮಂಜುನಾಥ ಪಿ., ಇರ್ಷಾದ್ ಅಲಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಜೆ. ಎಫ್. ಹೊಸಮನಿ ವಹಿಸಿದ್ದರು. ವೈಆರ್ಸಿ ಅಧಿಕಾರಿ ಡಾ. ಚೇತನಾ ಎಂ. ಸ್ವಾಗತಿಸಿದರು. ಡಾ. ಅಶ್ವಿನಿ ಹತ್ತಿಕಾಳ ವಂದಿಸಿದರು. ಸೋಮಣ್ಣ ಡಂಬರಮತ್ತೂರು ನಿರ್ವಹಿಸಿದರು.