ಕೋವಿಡ್ -19: ಮಂಗಳೂರಿನ ಧಕ್ಕೆಯಲ್ಲಿ ಮೀನುಗಾರಿಕೆ ಸ್ಥಗಿತ
ಮಂಗಳೂರು,
ಮಾ.27,ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನಗರದ ಪ್ರಮುಖ
ಮೀನುಗಾರಿಕಾ ಚಟುವಟಿಕೆಯ ಪ್ರದೇಶವಾದ ಧಕ್ಕೆಯನ್ನು ಬಂದ್ ಮಾಡುವಂತೆ ಶುಕ್ರವಾರ
ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಬುಧವಾರ ನಾವು ಮೀನುಗಳನ್ನು ಹಿಡಿದು ರಾಶಿ ಹಾಕಿದ್ದೇವೆ. ಆದರೆ ಇನ್ನೂ ಮಾರಾಟವಾಗಿಲ್ಲ ಎಂದು ಮೀನುಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕೆಲವು
ಮೀನುಗಾರರು ಪೊಲೀಸರ ಅನುಮತಿ ಪಡೆದು ಮೀನು ಮಾರಾಟ ಮಾಡುವ ಸ್ಥಳಗಳಿಗೆ ತಲುಪಿಸಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಎಲ್ಲಾ ಬೋಟ್ಗಳು ಮತ್ತೆ ದಡಕ್ಕೆ ಬಂದು ಬಂದರಿನಲ್ಲಿ ಲಂಗರು
ಹಾಕಿವೆ.ಈಗಾಗಲೇ ಮೀನುಗಾರಿಕೆಗೆ ತೆರಳಿದವರಿಗೆ ಹಿಂದಿರುಗುವಂತೆ ಸೂಚನೆ
ರವಾನಿಸಲಾಗಿದೆ. ಧಕ್ಕೆಯಲ್ಲಿ 400 ಬೋಟ್ಗಳು ನಿಂತಿರುವುದನ್ನು ಮತ್ತು ಈ
ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ಇರುವುದನ್ನು ಗಮನಿಸಿದ ಬಳಿಕ ಧಕ್ಕೆಯನ್ನು ಬಂದ್
ಮಾಡುವಂತೆ ಮೀನುಗಾರಿಕೆ ಇಲಾಖೆ ನಿರ್ದೇಶನ ನೀಡಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 