ಗುಬ್ಬಿ ತಾಲ್ಲೂಕಿನಲ್ಲಿ ಚಿರತೆ ದಾಳಿಗೆ ಐದು ವರ್ಷದ ಬಾಲಕ ಬಲಿ
ತುಮಕೂರು, ಜ10,ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮನಿಕುಪ್ಪೆ ಗ್ರಾಮದಲ್ಲಿ ಶುಕ್ರವಾರ ಚಿರತೆ ದಾಳಿಗೆ ಐದು ವರ್ಷದ ಬಾಲಕ ಬಲಿಯಾಗಿದ್ದಾನೆ.ಮೃತಪಟ್ಟ ಬಾಲಕನನ್ನು ಸಮರ್ಥ್ ಗೌಡ ಎಂದು ಗುರುತಿಸಲಾಗಿದೆ. ನತದೃಷ್ಟ ಬಾಲಕ ತನ್ನ ಅಜ್ಜಿಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಚಿರತೆ, ಮೊದಲು ಹಸುವಿನ ಮೇಲೆ ದಾಳಿ ಮಾಡಿದೆ. ನಂತರ ಹಿಂದೆ ನಡೆದು ಬರುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಕ್ಕೆ ಎಳೆದೊಯ್ದಿದೆ. ಅರಣ್ಯಾಧಿಕಾರಿಗಳು ಶೋಧ ನಡೆಸಿದ ನಂತರ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಂತರ ಬಾಲಕನ ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 