ಮನುಷ್ಯನ ದುರಾಸೆಯಿಂದ ಅರಣ್ಯ ಸಂಪತ್ತು ನಾಶ: .ಪಾಟೀಲ್
Forest wealth is being destroyed due to human greed: Patil
ಮನುಷ್ಯನ ದುರಾಸೆಯಿಂದ ಅರಣ್ಯ ಸಂಪತ್ತು ನಾಶ: .ಪಾಟೀಲ್
ಹೂವಿನಹಡಗಲಿ 21: ಪ್ರಸ್ತುತ ದಿನಗಳಲ್ಲಿ ಮನುಷ್ಯನ ದುರಾಸೆ.ವಿಕೃತ ಚಟುವಟಿಕೆ ಗಳಿಂದ ಅರಣ್ಯ ನಾಶವಾಗಿ ಮುಂದಿನ ಪೀಳಿಗೆಗೆ ಭೂಮಿ ಮೇಲಿನ ಸಂಪನ್ಮೂಲಗಳ ಕೊರತೆ ಬಗ್ಗೆ ಜಾಗೃತಿ ಅಗತ್ಯ ಎಂದು ಪ್ರಾಚಾರ್ಯ ಎಸ್.ಎಸ್.ಪಾಟೀಲ್ ವಿಷಾಧ ವ್ಯಕ್ತಪಡಿಸಿದರು.
ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಕಾಲೇಜಿನ ಪ್ರಾಣಿ ಶಸ್ತ್ರ ಮತ್ತು ಸಸ್ಯ ಶಾಸ್ತ್ರ ವಿಭಾಗದಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಅರಣ್ಯ ದಿನ ಹಾಗೂ ವಿಶ್ವ ಜಲ ದಿನ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.
ಅರಣ್ಯ ರಕ್ಷಣೆ ಗೆ ಪ್ರತಿ ಮನೆ ಗೆ ಒಂದು ಗಿಡವನ್ನು ನಟ್ಟು ಪಾಲನೆ ಮಾಡಬೇಕು ಜತೆಗೆ ಬೇಸಿಗೆ ಸಂದರ್ಭದಲ್ಲಿ ಪ್ರಾಣಿ ಪಕ್ಷಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಿ ಎಂದ ಅವರು ಕೆರೆ ಕಟ್ಟೆ ಗಳನ್ನು ನಿರ್ಮಿಸಿ ಅಂತರ್ಜಲ ಹೆಚ್ಚಿಸಬೇಕು ಎಂದರು. ವಿಜ್ಞಾನ ವಿಭಾಗದ ಮುಖ್ಯಸ್ಥ ಸದಾಶಿವ ಮಾತನಾಡಿ, ವಿಜ್ಞಾನ ಮತ್ತು ಮಣ್ಣು ಸಂರಕ್ಷಣೆ ಮುಂದಾಗಿ ಎಂದರು.
ಐಕ್ಯೂಎಸಿ ಸಂಯೋಜನಕಿ ಡಾ.ಮಹಿಮಾ ಜ್ಯೋತಿ, ಪ್ರಾಧ್ಯಾಪಕ ಡಾ.ಚಂದ್ರಬಾಬು ಹಾಗೂ ಇತರರು ಮಾತನಾಡಿದರು.ದೈಹಿಕ ನಿರ್ದೇಶಕ ಬಡೇಸಾಬ್ ನಾಯಕ, ಸಹಾಯಕ ಪ್ರಾಧ್ಯಾಪಕರಾದ ಕೆ.ಎಂ.ಹರ್ಷ, ಎಸ್.ಬಿ.ಸಂಜಯ್, ಚಂದನಾ ಹೆಚ್.ಎಂ, ಚೈತ್ರ ಜೆ, ಕುಸುಮ ಹೆಚ್.ಎಂ, ಅನ್ನದಾನಪ್ಪ, ಎ.ಎಂ.ಪಿ.ಸಂದೀಪ ಹಾಗೂ ವಿದ್ಯಾರ್ಥಿಗಳು ಇತರರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 