ಒಳ ಮೀಸಲಾತಿ ಏಕ ಸದಸ್ಯ ಆಯೋಗ ರಚನೆ
Formation of a single-member commission on internal reservation
ಒಳ ಮೀಸಲಾತಿ ಏಕ ಸದಸ್ಯ ಆಯೋಗ ರಚನೆ
ರಾಯಬಾಗ 04: ಮೇ.5 ರಿಂದ ಆರಂಭವಾಗಲಿರುವ ಒಳ ಮಿಸಲಾತಿ ಸಮೀಕ್ಷೆಯಲ್ಲಿ ಭಜಂತ್ರಿ ಸಮುದಾಯದವರು ಮೂಲ ಜಾತಿ ಕೊರವ, ಕೊರವರ, ಕೊರಮಾ ಇದರಲ್ಲಿ ಯಾವುದಾದರೊಂದು ಬರೆಸಬೇಕೆಂದು ಕಿತ್ತೂರ ಕರ್ನಾಟಕದ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಹನುಮಂತ ಭಜಂತ್ರಿ ಹೇಳಿದರು.
ಭಾನುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸರ್ಕಾರ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿದೆ. 101 ಪರಿಶಿಷ್ಟ ಉಪ ಜಾತಿಗಳ ಸ್ಥಿತಿಗತಿಗಳ ದತ್ತಾಂಶ ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಆಯೋಗವು ಪರಿಶಿಷ್ಟ ಜಾತಿಯ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅಧ್ಯಯನ ಮಾಡಲು ಮುಂದಾಗಿದೆ ಎಂದು ತಿಳಿಸಿದರು. ಕಾರಣ ಭಜಂತ್ರಿ ಜನಾಂಗದವರು ತಮ್ಮ ಮೂಲ ಜಾತಿ ನಮೂದಿಸಬೇಕೆಂದು ತಿಳಿಸಿದರು. ಸಮಾಜದ ಮುಖಂಡರಾದ ಶಿವಪ್ಪ ಭಜಂತ್ರಿ ಮಾಯಪ್ಪ ಭಜಂತ್ರಿ, ಮಹಾದೇವ ಮಲಾಜೂರೆ, ಗೋವಿಂದ ಭಜಂತ್ರಿ, ರಾಜು ಭಜಂತ್ರಿ, ರಂಜಿತ ಭಜಂತ್ರಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 