ಮಾಜಿ ಸಂಸದ, ಜೆಡಿಎಸ್ ಹಿರಿಯ ನಾಯಕ ರಾಜಾ ರಂಗಪ್ಪ ನಾಯಕ್ ನಿಧನ
ರಾಯಚೂರು, ಮೇ 11,ಮಾಜಿ ಸಂಸದ ಹಾಗೂ ಜೆಡಿಎಸ್ ಹಿರಿಯ ನಾಯಕ ರಾಜಾ ರಂಗಪ್ಪ ನಾಯಕ್ ಸೋಮವಾರ ಇಲ್ಲಿ ನಿಧನರಾಗಿದ್ದಾರೆ.ಅವರಿಗೆ 61 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ರಂಗಪ್ಪ ಅವರು 1996ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಜೆಡಿಎಸ್ನಿಂದ ಸ್ಪರ್ಧಿಸಿ ಗೆದ್ದಿದ್ದರು. 1996ರ ಚುನಾವಣೆಯಲ್ಲಿ ಒಟ್ಟು ಜೆಡಿಎಸ್ನಿಂದ 16 ಮಂದಿ ಗೆದ್ದಿದ್ದರು. ಅದರಲ್ಲಿ ರಂಗಪ್ಪ ಕೂಡ ಒಬ್ಬರಾಗಿದ್ದರು.ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ರಂಗಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಜಲಸಂಪನ್ಮೂಲ ಸಚಿವ, ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಸಂತಾಪ ಸೂಚಿಸಿ, ರಂಗಪ್ಪ ಅವರು ಅತ್ಯಂತ ಹಿಂದುಳಿದ ಪ್ರದೇಶವಾದ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಸ್ಮರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 