ವಿದ್ಯಾಥರ್ಿನಿ ಕೊಲೆಗೆ ಮಾಜಿ ಸಂಸದ ಕುನ್ನೂರ ಖಂಡನೆ
ಲೋಕದರ್ಶನ ವರದಿ
ಶಿಗ್ಗಾವಿ : ಹಾವೇರಿ ಜಿ. ಹೆಚ್. ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಸವಣೂರ ತಾಲೂಕ ಮಣ್ಣೂರ ಗ್ರಾಮದ ವಿದ್ಯಾಥರ್ಿನಿ ರೇಣುಕಾ ಪಾಟೀಲ ಇವಳನ್ನು ದುಷ್ಕಮರ್ಿಗಳು ಬರ್ಬರವಾಗಿ ಹೆತ್ಯಗೈದು ವರದಾ ನದಿ ಬಳಿ ಸುಟ್ಟು ಹಾಕಿರುವ ಕೃತ್ಯವನ್ನು ಬಿಜೆಪಿ ಮುಖಂಡ ಮಾಜಿ ಸಂಸದ ಮಂಜುನಾಥ ಕುನ್ನೂರ ತೀವ್ರವಾಗಿ ಖಂಡಿಸಿದ್ದಾರೆ.
ಶಾಂತಿ-ಸೌಹಾರ್ಧತೆಗೆ ಹೆಸರಾಗಿರುವ ಹಾವೇರಿ ನೆಲದಲ್ಲಿ ಇಂಥ ಕೃತ್ಯ ನಡೆದಿರುವುದು ಆಘಾತಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿ ವಿದ್ಯಾಥರ್ಿನಿಯ ಕುಟುಂಬಸ್ತರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಪ್ರಾಥರ್ಿಸಿದ ಅವರು ಜಿಲ್ಲೆಯಲ್ಲಿ ಇಂಥ ಕೃತ್ಯಗಳು ಮರುಕಳಿಸದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಇದಕ್ಕೆ ವಿಶೇಷ ಕಾನೂನು ರೂಪಿಸುವ ಮೂಲಕ ವಿದ್ಯಾಥರ್ಿನಿಯರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಬೇಕೆಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 